alex Certify ವೀರೇಂದ್ರ ಹೆಗ್ಗಡೆಯವರನ್ನ ಭೇಟಿಯಾದ ರಿಷಬ್ ದಂಪತಿ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೀರೇಂದ್ರ ಹೆಗ್ಗಡೆಯವರನ್ನ ಭೇಟಿಯಾದ ರಿಷಬ್ ದಂಪತಿ..!

ಬೆಳ್ತಂಗಡಿ- ಕಾಂತಾರ ಸಿನಿಮಾ ನಿರೀಕ್ಷೆಗೂ ಮೀರಿ ಯಶಸ್ಸು ಕಾಣ್ತಾ ಇದೆ. ಬೇರೆ ಬೇರೆ ಭಾಷೆಗಳಲ್ಲಿ ದಾಖಲೆ ಸೃಷ್ಟಿ ಮಾಡ್ತಾ ಇದೆ ಈ ಸಿನಿಮಾ. ಈ ಸಕ್ಸಸ್ ಬೆನ್ನಲ್ಲೇ ರಿಷಬ್ ಪ್ರವಾಸ ಕೈಗೊಂಡಿದ್ದಾರೆ. ಇಂದು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಪತ್ನಿ ಸಮೇತವಾಗಿ ಭೇಟಿ ನೀಡಿ ಮಂಜುನಾಥನ‌ ದರ್ಶನ ಮಾಡಿದ್ದಾರೆ.

ಹೌದು, ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಿದ್ದ ರಿಷಬ್ ಸ್ವಾಮಿ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು. ಇದೇ ವೇಳೆ ಸಿನಿಮಾದ ಯಶಸ್ಸಿನ ಕುರಿತು ಮಾತುಕತೆ ನಡೆಸಿದರು. ಇನ್ನು ಭೇಟಿಯ ವೇಳೆ ವೀರೇಂದ್ರ ಹೆಗ್ಗಡೆಯವರ ಪತ್ನಿ ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರು ಇದ್ದರು.

ಇನ್ನು ಇದೇ ವೇಳೆ ನಟ ಪ್ರಮೋದ್ ಶೆಟ್ಟಿ ಕೂಡ ಭಾಗಿಯಾಗಿದ್ದರು. ಬಳಿಕ ಮಣ್ಣಿನ ಹರಕೆಗೆ ಹೆಸರು ವಾಸಿಯಾದ ಸೂರ್ಯ ಶ್ರೀ ಸದಾಶಿವರುದ್ರ ದೇವಸ್ಥಾನ ಭೇಟಿ ಮಾಡಿ ದೇವರ ಆಶೀರ್ವಾದ ಪಡೆದರು‌. ಒಟ್ನಲ್ಲಿ ಕಾಂತಾರ ಯಶಸ್ವಿ ಬೆನ್ನಲ್ಲೇ ಟೆಂಪಲ್ ರನ್ ಮಾಡುತ್ತಿದ್ದಾರೆ ರಿಷಬ್.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...