alex Certify ವೃದ್ಧ ದಂಪತಿ ಕೊಲೆ ಮಾಡಿ ಗುಡಿಸಲಿಗೆ ಬೆಂಕಿ ಹಚ್ಚಿದ ವ್ಯಕ್ತಿ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೃದ್ಧ ದಂಪತಿ ಕೊಲೆ ಮಾಡಿ ಗುಡಿಸಲಿಗೆ ಬೆಂಕಿ ಹಚ್ಚಿದ ವ್ಯಕ್ತಿ…!

ಜಬಲ್ಪುರ: ವ್ಯಕ್ತಿಯೊಬ್ಬ ವೃದ್ಧ ದಂಪತಿಯನ್ನು ಕೊಲೆ ಮಾಡಿ ಅವರಿದ್ದ ಗುಡಿಸಲಿಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಈ ಘಟನೆ ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯಲ್ಲಿ ನಡೆದಿದ್ದು, ವ್ಯಕ್ತಿಯೊಬ್ಬ ತನ್ನ ಸಂಬಂಧಿಗಳಾಗಿದ್ದ ವೃದ್ಧ ದಂಪತಿಯನ್ನು ಕೊಲೆ ಮಾಡಿದ್ದಾನೆ. ಕೊಲೆಯಾದ ದಂಪತಿ ಬ್ಲಾಕ್ ಮ್ಯಾಜಿಕ್ ಮಾಡಿದ್ದಾರೆ ಎಂಬ ಅನುಮಾನದಿಂದ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ದಯಾರಾಮ್ ಕುಲಸ್ತೆ(27) ಎಂಬಾತನನ್ನು ಬಂಧಿಸಲಾಗಿದ್ದು, ಸುಮೇರ್ ಸಿಂಗ್ ಕುಲಸ್ತೆ(60) ಹಾಗೂ ಸಿಯಾಬಾಯಿ(55) ಕೊಲೆಯಾದ ದುರ್ದೈವಿಗಳಾಗಿದ್ದಾರೆ. ಕೊಲೆ ಮಾಡಿದ್ದ ವ್ಯಕ್ತಿ ವೃದ್ಧ ದಂಪತಿಗೆ ಸೋದರಳಿಯ ಎನ್ನಲಾಗಿದೆ.

ಆರೋಪಿಯು ಹರಿತವಾದ ಆಯುಧದಿಂದ ವೃದ್ಧರನ್ನು ಕೊಲೆ ಮಾಡಿದ್ದಾನೆ. ಆ ನಂತರ ಅವರಿದ್ದ ಗುಡಿಸಲಿಗೆ ಬೆಂಕಿ ಹಚ್ಚಿದ್ದಾನೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ಶಿವೇಂದ್ರ ಸಿಂಗ್ ಹೇಳಿದ್ದಾರೆ.

ಆಸ್ತಿಯ ವಿಚಾರದಲ್ಲಿ ಕೂಡ ದಂಪತಿ ಹಾಗೂ ಆರೋಪಿಯ ಮಧ್ಯೆ ಮನಸ್ತಾಪ ಇತ್ತು ಎನ್ನಲಾಗಿದೆ. ಸಾವನ್ನಪ್ಪಿದ ವೃದ್ಧರು ಮಾಡಿದ್ದ ಬ್ಲಾಕ್ ಮ್ಯಾಜಿಕ್ ನಿಂದಲೇ ತನ್ನ ಸಹೋದರ ಆತ್ಮಹತ್ಯೆ ಮಾಡಿಕೊಂಡಿದ್ದ ಎಂದು ಆರೋಪಿ ಭಾವಿಸಿದ್ದ. ಹೀಗಾಗಿ ಕೊಲೆ ಮಾಡಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಈ ಕುರಿತು ದೂರು ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Только гении могут найти Найдите 3 различия на картинках с зайцами для людей Как пройти по крыше: