ಶಿವಕುಮಾರ್ ಅವರದ್ದು ಅದೇ ದಂಧೆ ಈಗಲೂ ಅದನ್ನೇ ಮುಂದುವರಿಸಿದ್ದಾರೆ; ಬಿಜೆಪಿ ಶಾಸಕರಿಗೆ ಗಾಳ ಹಾಕುತ್ತಿರುವುದಕ್ಕೆ ಯತ್ನಾಳ್ ಕಿಡಿ

ಬಿಜೆಪಿ ಶಾಸಕರನ್ನು ಸೆಳೆಯಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಯತ್ನ ನಡೆಸುತ್ತಿದ್ದಾರೆ ಎಂಬ ಮಾತುಗಳ ಹಿನ್ನೆಲೆಯಲ್ಲಿ ಅವರ ವಿರುದ್ಧ ಕಿಡಿ ಕಾರಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಈ ಮೊದಲಿನಿಂದಲೂ ಅವರದ್ದು ಅದೇ ದಂಧೆ. ಈಗಲೂ ಅದನ್ನೇ ಮುಂದುವರಿಸಿದ್ದಾರೆ ಎಂದು ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರ ಬಳಿ ಅಭ್ಯರ್ಥಿಗಳೇ ಇಲ್ಲ. ಹೀಗಾಗಿ ನಮ್ಮ ಶಾಸಕರನ್ನು ಸೆಳೆಯಲು ಪ್ರಯತ್ನಿಸುತ್ತಿದ್ದಾರೆ. ಆದರೆ ಯಾರೂ ಕೂಡ ಬಿಜೆಪಿ ಬಿಟ್ಟು ಹೋಗುವುದಿಲ್ಲ. ಒಂದೊಮ್ಮೆ ಯಾರಾದರೂ ಹೋದರೆ ಅವರದ್ದು ಎಲ್ಲವೂ ಮುಗಿದಿದೆ ಎಂದರ್ಥ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read