alex Certify ಶೀಘ್ರದಲ್ಲೇ ಹಸೆಮಣೆ ಏರಲಿದ್ದಾರಾ ರಶ್ಮಿಕಾ – ವಿಜಯ್​ ದೇವರಕೊಂಡ ಜೋಡಿ…..? ಸಂದರ್ಶನದಲ್ಲಿ ಮದುವೆ ವಿಚಾರ ಹೇಳಿದ್ದೇನು ‘ಪುಷ್ಪಾ’ ನಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶೀಘ್ರದಲ್ಲೇ ಹಸೆಮಣೆ ಏರಲಿದ್ದಾರಾ ರಶ್ಮಿಕಾ – ವಿಜಯ್​ ದೇವರಕೊಂಡ ಜೋಡಿ…..? ಸಂದರ್ಶನದಲ್ಲಿ ಮದುವೆ ವಿಚಾರ ಹೇಳಿದ್ದೇನು ‘ಪುಷ್ಪಾ’ ನಟಿ

ಕಳೆದ ವಾರದಿಂದ ನಟ ವಿಜಯ್​ ದೇವರಕೊಂಡ ಹಾಗೂ ನಟಿ ರಶ್ಮಿಕಾ ಮಂದಣ್ಣರ ಮದುವೆಯ ಬಗ್ಗೆ ಸಾಕಷ್ಟು ಊಹಾಪೋಹಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇದಾಗಿ ಒಂದು ವಾರದ ಬಳಿಕ ನಟಿ ರಶ್ಮಿಕಾ ಮಂದಣ್ಣ ತೆಲುಗು ಸಂದರ್ಶನವೊಂದರಲ್ಲಿ ನಮ್ಮ ಮದುವೆಯ ಪ್ಲಾನ್​ಗಳ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ. ನಟ ವಿಜಯ್​ ದೇವರಕೊಂಡ ಹಾಗೂ ನಟಿ ರಶ್ಮಿಕಾ ಮಂದಣ್ಣ ಡೇಟಿಂಗ್​ನಲ್ಲಿದ್ದು ಇವರಿಬ್ಬರು ಜೊತೆಯಾಗಿ ಹೊರಗಡೆ ಸುತ್ತಾಡುತ್ತಿರುವ ಫೋಟೋಗಳು ಆಗಾಗ ಕ್ಯಾಮರಾ ಕಣ್ಣಿಗೆ ಬೀಳುತ್ತಲೇ ಇರುತ್ತದೆ.

ಕಳೆದ ವಾರ, ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಈ ವರ್ಷದ ಕೊನೆಯಲ್ಲಿ ಮದುವೆಯಾಗುತ್ತಾರೆ ಎಂಬ ವದಂತಿಗಳು ಹರಿದಾಡಿದ್ದವು. ಸುದ್ದಿ ವೈರಲ್ ಆದ ನಂತರ, ನಟ ಅರ್ಜುನ್ ರೆಡ್ಡಿ ಸಾಮಾಜಿಕ ಮಾಧ್ಯಮದಲ್ಲಿ ಟ್ವೀಟ್ ಮೂಲಕ ವದಂತಿಗಳನ್ನು ತಳ್ಳಿಹಾಕಿದರು.

ಇದೀಗ ನಟಿ ರಶ್ಮಿಕಾ ಮಂದಣ್ಣ ಕೂಡ ಸಂದರ್ಶನವೊಂದರಲ್ಲಿ ತಮ್ಮ ಮದುವೆಯ ವದಂತಿಗಳನ್ನು ತಳ್ಳಿ ಹಾಕಿದ್ದಾರೆ. ನಿಮ್ಮ ಮುಂದಿನ ಯೋಜನೆಗಳು ಏನು ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ನಟಿ ರಶ್ಮಿಕಾ, ಇವೆಲ್ಲವು ಒಂದು ಟೈಮ್​ ಪಾಸ್​ ವದಂತಿ. ನಾನು ಮದುವೆಯಾಗಲು ಇನ್ನೂ ಸಾಕಷ್ಟು ಸಮಯವಿದೆ. ಸಮಯ ಬಂದಾಗ ನಾನು ಖಂಡಿತವಾಗಿಯೂ ಮದುವೆಯಾಗ್ತೇನೆ. ಈ ರೀತಿಯ ವದಂತಿಗಳನ್ನು ನೋಡಿ ನಾನು ಅದನ್ನು ಸುಮ್ಮನೇ ಬಿಟ್ಟುಬಿಡುತ್ತೇನೆ ಎಂದು ಹೇಳಿದರು.

ನಿರ್ದೇಶಕ ಪರಶುರಾಮ್​ರ ಗೀತ ಗೋವಿಂದಂ ಸಿನಿಮಾ ಮೂಲಕ ನಟ ವಿಜಯ್​ ದೇವರಕೊಂಡ ಹಾಗು ರಶ್ಮಿಕಾ ಮಂದಣ್ಣ ಮೊಟ್ಟ ಮೊದಲ ಬಾರಿಗೆ ತೆರೆ ಮೇಲೆ ಒಂದಾಗಿ ಕಾಣಿಸಿಕೊಂಡಿತ್ತು. ಈ ಸಿನಿಮಾ ಬಾಕ್ಸಾಫೀಸಿನಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡಿತ್ತು, ಅಲ್ಲದೇ ಇದು ನಟಿ ರಶ್ಮಿಕಾಗೆ ತೆಲುಗು ಚಿತ್ರರಂಗದಲ್ಲಿ ಬಲವಾಗಿ ಬೇರೂರುವಂತೆ ಮಾಡಿತು. ಇಬ್ಬರ ತೆರೆ ಮೇಲಿನ ಕೆಮಿಸ್ಟ್ರಿಗೆ ಒಂದು ದೊಡ್ಡ ಅಭಿಮಾನಿ ಬಳಗವೇ ಹುಟ್ಟುಕೊಂಡಿತು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Jak se Jak teplota vody Proč semena papriky neklíčí a jak Vědci objevili nejzdravější sacharidy Vepřový jazyk: Tajemství přípravy lahodné lahůdky Odborník na výživu přináší