ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಶ್ರೀ ಕ್ಷೇತ್ರ ವರದಹಳ್ಳಿಯಲ್ಲಿ ಮಾರ್ಚ್ 30 ರಿಂದ ಏಪ್ರಿಲ್ 8ರವರೆಗೆ ಭಗವಾನ್ ಶ್ರೀಧರ ಸ್ವಾಮಿಗಳ 50ನೇ ಆರಾಧನಾ ಮಹೋತ್ಸವವನ್ನು ನಡೆಸಲಾಗುತ್ತಿದೆ.
ಈ ಸಂದರ್ಭದಲ್ಲಿ ರಾಮ ತಾರಕ ಹವನ, ಕೃಷ್ಣ ಯಜುರ್ವೇದ ಸಂಹಿತಾ ಹವನ ನಡೆಯಲಿದ್ದು, ಏಪ್ರಿಲ್ 8ರಂದು ವೇದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದೆ.
ಅಲ್ಲದೆ ಈ ಅವಧಿಯಲ್ಲಿ ಪ್ರತಿದಿನ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸಿಕೊಡಬೇಕೆಂದು ಶ್ರೀ ಕ್ಷೇತ್ರದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.