alex Certify ಸಂಪುಟ ಸಹೋದ್ಯೋಗಿಯನ್ನು ಕಳೆದುಕೊಂಡು ಕಣ್ಣೀರಿಟ್ಟ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಂಪುಟ ಸಹೋದ್ಯೋಗಿಯನ್ನು ಕಳೆದುಕೊಂಡು ಕಣ್ಣೀರಿಟ್ಟ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಸಚಿವರಾಗಿದ್ದ ಉಮೇಶ್ ಕತ್ತಿ ಕಳೆದ ರಾತ್ರಿ ವಿಧಿವಶರಾಗಿದ್ದಾರೆ. ಹೃದಯಾಘಾತಕ್ಕೊಳಗಾಗಿದ್ದ ಅವರನ್ನು ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ತಮ್ಮ ಸಂಪುಟ ಸಹೋದ್ಯೋಗಿ ಹೃದಯಾಘಾತಕ್ಕೊಳಗಾದ ವಿಷಯ ತಿಳಿಯುತ್ತಿದ್ದಂತೆಯೇ ಆಸ್ಪತ್ರೆಗೆ ದೌಡಾಯಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಕಣ್ಣೀರಿಟ್ಟಿದ್ದಾರೆ.

ಉಮೇಶ್ ಕತ್ತಿ ನನಗೆ ಹಿರಿಯ ಸಹೋದರ ಇದ್ದಂತೆ ಇದ್ದರು. ಮಾರ್ಗದರ್ಶಕರೂ ಕೂಡ ಆಗಿದ್ದ ಅವರು ವಿಧಿವಶರಾಗಿರುವುದು ನನಗೆ ತೀವ್ರ ದುಃಖ ತಂದಿದೆ ಎಂದು ಹೇಳಿ ಬಸವರಾಜ ಬೊಮ್ಮಾಯಿ ಭಾವುಕರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...