alex Certify ಸಂಸತ್ತಿನಲ್ಲಿ ಕೆಲ ಪದಗಳ ಬಳಕೆ ನಿಷೇಧದ ಬೆನ್ನಲ್ಲೇ ಆವರಣದಲ್ಲಿ ಧರಣಿಗೂ ‘ನಿರ್ಬಂಧ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಂಸತ್ತಿನಲ್ಲಿ ಕೆಲ ಪದಗಳ ಬಳಕೆ ನಿಷೇಧದ ಬೆನ್ನಲ್ಲೇ ಆವರಣದಲ್ಲಿ ಧರಣಿಗೂ ‘ನಿರ್ಬಂಧ’

ಜುಲೈ 18 ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಸಂಸತ್ತಿನಲ್ಲಿ ಕೆಲ ಪದಗಳ ಬಳಕೆಯನ್ನು ನಿಷೇಧಿಸಿ ಎರಡು ದಿನಗಳ ಹಿಂದಷ್ಟೇ ಆದೇಶ ಹೊರಡಿಸಲಾಗಿತ್ತು. ಇದೀಗ ಅದರ ಮರುದಿನವೇ ಮತ್ತೊಂದು ಆದೇಶ ಹೊರ ಬಿದ್ದಿದೆ.

ರಾಜ್ಯಸಭೆಯ ಪ್ರಧಾನ ಕಾರ್ಯದರ್ಶಿ, ಈ ಸುತ್ತೋಲೆ ಹೊರಡಿಸಿದ್ದು ಇನ್ನು ಮುಂದೆ ಸಂಸತ್ ಭವನದ ಆವರಣದಲ್ಲಿ ಪ್ರತಿಭಟನೆ, ಧರಣಿ, ಉಪವಾಸ ಅಥವಾ ಧಾರ್ಮಿಕ ಸಮಾರಂಭಗಳನ್ನು ನಡೆಸುವಂತಿಲ್ಲ ಎಂದು ತಿಳಿಸಲಾಗಿದೆ.

ಕೇಂದ್ರ ಸರ್ಕಾರದ ಈ ನಡೆಗೆ ಪ್ರತಿಪಕ್ಷಗಳ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಈ ಸುತ್ತೋಲೆಯನ್ನು ಕೂಡಲೇ ಹಿಂಪಡೆಯುವಂತೆ ಆಗ್ರಹಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...