alex Certify ಸಚಿವ ಉಮೇಶ್ ಕತ್ತಿ ಹುಟ್ಟೂರಿನಲ್ಲಿ ‘ನೀರವ ಮೌನ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಚಿವ ಉಮೇಶ್ ಕತ್ತಿ ಹುಟ್ಟೂರಿನಲ್ಲಿ ‘ನೀರವ ಮೌನ’

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಆಹಾರ ಸಚಿವರಾಗಿದ್ದ ಉಮೇಶ್ ಕತ್ತಿ ಕಳೆದ ರಾತ್ರಿ ವಿಧಿವಶರಾಗಿದ್ದಾರೆ. ನೆನ್ನೆ ರಾತ್ರಿಯವರೆಗೂ ಲವಲವಿಕೆಯಿಂದ ಇದ್ದ ಅವರಿಗೆ 10 ಗಂಟೆ ಸುಮಾರಿಗೆ ಬೆಂಗಳೂರಿನ ಡಾಲರ್ಸ್ ಕಾಲೋನಿಯ ನಿವಾಸದಲ್ಲಿಯೇ ಹೃದಯಾಘಾತವಾಗಿದೆ.

ಕೂಡಲೇ ಅವರನ್ನು ಎಂಎಸ್ ರಾಮಯ್ಯ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಅವರ ಅಂತ್ಯಕ್ರಿಯೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ ಇಂದು ನೆರವೇರಲಿದೆ.

ಉಮೇಶ್ ಕತ್ತಿ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮೂರು ದಿನಗಳ ಕಾಲ ಶೋಕಾಚರಣೆಗೆ ಸೂಚಿಸಿದ್ದು ಬೆಳಗಾವಿ ಜಿಲ್ಲೆಯಾದ್ಯಂತ ಸರ್ಕಾರಿ ಕಚೇರಿಗಳು ಹಾಗೂ ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ತಮ್ಮ ನೆಚ್ಚಿನ ನಾಯಕನನ್ನು ಕಳೆದುಕೊಂಡು ಬೆಳಗಾವಿ ಜಿಲ್ಲೆಯ ಜನ ದಿಗ್ಬ್ರಾಂತರಾಗಿದ್ದು, ಅದರಲ್ಲೂ ಉಮೇಶ್ ಕತ್ತಿ ಅವರ ಹುಟ್ಟೂರು ಬೆಲ್ಲದ ಬಾಗೇವಾಡಿಯಲ್ಲಿ ನೀರವ ಮೌನ ಆವರಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...