alex Certify ಸಚಿವ ಶ್ರೀರಾಮುಲುಗೆ ಬಳ್ಳಾರಿ ಉಸ್ತುವಾರಿ ನೀಡಲು ಮನವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಚಿವ ಶ್ರೀರಾಮುಲುಗೆ ಬಳ್ಳಾರಿ ಉಸ್ತುವಾರಿ ನೀಡಲು ಮನವಿ

ಬಳ್ಳಾರಿ: ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಜವಾಬ್ದಾರಿಯನ್ನು ಸಚಿವ ಶ್ರೀರಾಮುಲು ಅವರಿಗೆ ನೀಡುವಂತೆ ಆನಂದ್ ಸಿಂಗ್, ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದಾರೆ.

ಎರಡು ಜಿಲ್ಲಾ ಉಸ್ತುವಾರಿಯಿಂದಾಗಿ ಸ್ವಲ್ಪ ಒತ್ತಡವಿರುವುದರಿಂದ ಬಳ್ಳಾರಿ ಜಿಲ್ಲಾ ಉಸ್ತುವಾರಿಯನ್ನು ಶ್ರೀರಾಮುಲು ಅವರಿಗೆ ನೀಡುವಂತೆ ಆನಂದ್ ಸಿಂಗ್ ಮನವಿ ಮಾಡಿದ್ದಾರೆ. ಸಿಎಂ ಭೇಟಿ ಬಳಿಕ ಮಾತನಾಡಿದ ಅವರು, ಈಗಾಗಲೇ ರಾಮುಲು ಅವರಿಗೆ ಬಳ್ಳಾರಿ ಉಸ್ತುವಾರಿ ನೀಡಬೇಕಿತ್ತು. ಆದರೆ ತಾಂತ್ರಿಕ ಕಾರಣಗಳಿಂದ ವಿಳಂಬವಾಗಿದೆ ಎಂದರು.

ಇದೇ ವೇಳೆ ಕಾಂಗ್ರೆಸ್ ಅಭ್ಯರ್ಥಿ ಕೆ.ಸಿ.ಕೊಂಡಯ್ಯ ಅವರೊಂದಿಗೆ ಬಿಜೆಪಿ ನಾಯಕರ ಸ್ನೇಹ ವಿಚಾರವಾಗಿ ಮಾತನಾಡಿದ ಆನಂದ್ ಸಿಂಗ್, ನಾವೆಲ್ಲ ಅಣ್ಣ-ತಮ್ಮಂದಿರಂತೆ ಇದ್ದೇವೆ. ಆದರೆ ರಾಜಕೀಯ ವಿಚಾರ ಬಂದಾಗ ಪಕ್ಷದ ಪರ ನಿಲ್ಲುತ್ತೇವೆ. ಸ್ನೇಹವೇ ಬೇರೆ. ರಾಜಕೀಯವೇ ಬೇರೆ. ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಖಚಿತ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...