alex Certify ಸಚಿವ ಶ್ರೀರಾಮುಲು ಮನವೊಲಿಕೆಗೆ ಸಿಎಂ ಬಿ.ಎಸ್.ವೈ. ಯತ್ನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಚಿವ ಶ್ರೀರಾಮುಲು ಮನವೊಲಿಕೆಗೆ ಸಿಎಂ ಬಿ.ಎಸ್.ವೈ. ಯತ್ನ

ಬೆಂಗಳೂರು: ವಂಚನೆ ಪ್ರಕರಣದಲ್ಲಿ ಆಪ್ತ ಕಾರ್ಯದರ್ಶಿ ರಾಜಣ್ಣ ಬಂಧನಕ್ಕೆ ಸಂಬಂಧಿಸಿದಂತೆ ಸಿಎಂ ಪುತ್ರ ಬಿ.ವೈ.ವಿಜಯೇಂದ್ರ ನಡೆಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದ ಸಚಿವ ಶ್ರೀರಾಮುಲು ಅವರ ಮನವೊಲಿಕೆಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಮುಂದಾಗಿದ್ದಾರೆ.

ಸಚಿವರ ಹೆಸರು ಹಾಗೂ ವಿಜಯೇಂದ್ರ ಹೆಸರು ದುರುಪಯೋಗ ಪಡಿಸಿಕೊಂಡು ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪಕ್ಕೆ ಸಂಬಂಧಿಸಿದಂತೆ ವಿಜಯೇಂದ್ರ ದೂರಿನ ಆಧಾರದ ಮೇಲೆ ಸಚಿವ ಶ್ರೀರಾಮುಲು ಪಿಎ ರಾಜಣ್ಣ ಅವರನ್ನು ನಿನ್ನೆ ಸಿಸಿಬಿ ಪೊಲೀಸರು ಬಂಧಿಸಿದ್ದರು. ತಮ್ಮ ಗಮನಕ್ಕೆ ತರದೇ ಏಕಾಏಕಿ ಆಪ್ತನ ಬಂಧನ ಮಾಡಿರುವ ಕ್ರಮಕ್ಕೆ ಶ್ರೀರಾಮುಲು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಅಲ್ಲದೇ ಹುಣಸಮಾರನಹಳ್ಳಿ ಬಳಿಯ ಗೆಸ್ಟ್ ಹೌಸ್ ನಲ್ಲಿ ಮೌನಕ್ಕೆ ಶರಣಾಗಿದ್ದರು. ಇದೀಗ ರಾಮುಲು ಅಸಮಾಧಾನ ಶಮನಗೊಳಿಸಲು ಸ್ವತಃ ಸಿಎಂ ಪ್ರಯತ್ನಿಸಿದ್ದಾರೆ.

BIG NEWS: ಡಿ.ಕೆ. ಶಿವಕುಮಾರ್ ಹೇಳಿಕೆಗೆ ಸಚಿವ ಸುಧಾಕರ್ ತಿರುಗೇಟು

ಶ್ರೀರಾಮುಲು ಅವರಿಗೆ ದೂರವಾಣಿ ಕರೆ ಮಾಡಿರುವ ಸಿಎಂ ಬಿ ಎಸ್ ವೈ, ಸಮಾಧಾನಪಡಿಸಿದ್ದು, ಬಂದು ಭೇಟಿಯಾಗಿ ಎಲ್ಲವನ್ನೂ ಸರಿಪಡಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಶ್ರೀರಾಮುಲು ಸಿಎಂ ಭೇಟಿಗೆ ತೆರಳಿದ್ದು, ಮಾತುಕತೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...