alex Certify ಸಚಿವ ಸಂಪುಟ ವಿಚಾರದಲ್ಲಿ ನಾನು ಹೇಳುವುದಷ್ಟನ್ನೇ ನಂಬಿ ಎಂದ ಸಿಎಂ ಬೊಮ್ಮಾಯಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಚಿವ ಸಂಪುಟ ವಿಚಾರದಲ್ಲಿ ನಾನು ಹೇಳುವುದಷ್ಟನ್ನೇ ನಂಬಿ ಎಂದ ಸಿಎಂ ಬೊಮ್ಮಾಯಿ

ಸಚಿವ ಸಂಪುಟ ವಿಚಾರದಲ್ಲಿ ವಿಷಯಗಳನ್ನು ನೀವೇ ಸೃಷ್ಟಿ ಮಾಡುತ್ತೀರಿ. ಬಳಿಕ ನೀವೇ ಸ್ಪಷ್ಟನೆ ಕೇಳುತ್ತೀರಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಮಾಧ್ಯಮಗಳ ಮುಂದೆ ಹೇಳಿದ್ದಾರೆ.

ವಿಧಾನಸೌಧದಲ್ಲಿ ದಿ. ಕೆ.ಸಿ ರೆಡ್ಡಿಯವರ 120ನೇ ಜನ್ಮದಿನೋತ್ಸವ ಪ್ರಯುಕ್ತ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ಅವರು, ಹೈಕಮಾಂಡ್​ ಸೂಚನೆ ನೀಡುತ್ತಿದ್ದಂತೆಯೇ ದೆಹಲಿಗೆ ತೆರಳಿ ಸಂಪುಟ ಪುನಾರಚನೆ ಬಗ್ಗೆ ಚರ್ಚಿಸುತ್ತೇನೆ ಎಂದು ಹೇಳಿದರು.

ಸಂಪುಟ ಪುನಾರಚನೆ ಅಥವಾ ವಿಸ್ತರಣೆ ವಿಚಾರದಲ್ಲಿ ಕೆಲವು ಕಟ್ಟು ಕತೆಗಳು ಹರಿದಾಡುತ್ತಿವೆ. ಈ ವಿಚಾರದಲ್ಲಿ ನಾನು ಹೇಳಿದ ವಿಚಾರಗಳನ್ನು ಮಾತ್ರ ನೀವು ಅಧಿಕೃತ ಎಂದು ಪ್ರಕಟಿಸಬೇಕು. ದೆಹಲಿಗೆ ತೆರಳಿ ಪಕ್ಷದ ವರಿಷ್ಠರ ಜೊತೆಯಲ್ಲಿ ಚರ್ಚಿಸಿದ ಬಳಿಕ ಮುಂದಿನ ನಡೆಯನ್ನು ನಿಮಗೆ ನಾನೇ ತಿಳಿಸುತ್ತೇನೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...