alex Certify ಸರ್ಕಾರದ ನಾಲ್ವರು ಸಚಿವರಿಂದ ಭ್ರಷ್ಟಾಚಾರ; ಬಿ.ಸಿ. ಪಾಟೀಲ್ ಹಗರಣವೂ ಬಯಲಿಗೆ; ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರದ ನಾಲ್ವರು ಸಚಿವರಿಂದ ಭ್ರಷ್ಟಾಚಾರ; ಬಿ.ಸಿ. ಪಾಟೀಲ್ ಹಗರಣವೂ ಬಯಲಿಗೆ; ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪ

ಮೈಸೂರು: ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರದ ಕೂಪವಾಗಿದೆ. ನಾಲ್ವರು ಸಚಿವರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಗಂಭೀರ ಆರೋಪ ಮಾಡಿದ್ದಾರೆ.

ಸ್ನೇಹಿತರಿಂದಲೇ ಉದ್ಯಮಿ ಪುತ್ರನ ಕಿಡ್ನಾಪ್:‌ ಕೊಲೆ ಮಾಡಿ ಕೋವಿಡ್‌ ಹೆಸರಿನಲ್ಲಿ ಸುಟ್ಟು ಹಾಕಿದ ಆರೋಪಿಗಳು

ಮೈಸೂರಿನಲ್ಲಿ ಮಾತನಾಡಿದ ಅವರು, ಕೃಷಿ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಯುತ್ತಿದೆ. ಸಚಿವ ಬಿ.ಸಿ. ಪಾಟೀಲ್ ಹಗರಣ ಕೂಡ ಬೆಳಕಿಗೆ ಬರುತ್ತಿದೆ. ಅಧಿಕಾರಿ ವರ್ಗಾವಣೆಗಾಗಿ ಹೆಚ್. ನಾಗೇಶ್ ಅಬಕಾರಿ ಸಚಿವರಾಗಿದ್ದಾಗ 1ಕೋಟಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಿದ್ದಾರೆ.

ಜುಲೈ 31ರವರೆಗೆ ಅಂತರಾಷ್ಟ್ರೀಯ ವಿಮಾನ ಹಾರಾಟ ರದ್ದು

ಇನ್ನು ಕಂದಾಯ ಸಚಿವ ಆರ್. ಅಶೋಕ್ ಪಿಎ ಗಂಗಾಧರ್ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಈ ಬಗ್ಗೆ ಯಾವುದೇ ತನಿಖೆಯಾಗಿಲ್ಲ. ಗಂಗಾಧರ್ ಅವರಿಗೆ ಆರ್. ಅಶೋಕ್ ಬಿ ರಿಪೋರ್ಟ್ ಕೊಡಿಸಿದ್ದಾರೆ. ಸಚಿವ ಗೋಪಾಲಯ್ಯ ಕೂಡ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಬಿಜೆಪಿ ಸರ್ಕಾರದ ಸಚಿವರೆಲ್ಲರೂ ಭ್ರಷ್ಟಾಚಾರದಲ್ಲಿ ನಿರತರಾಗಿದ್ದಾರೆ ಎಂದು ಲಕ್ಷ್ಮಣ್ ವಾಗ್ದಾಳಿ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...