alex Certify ಸರ್ಕಾರಿ ಅಧಿಕಾರಿಗಳು ‘ಹಲೋ’ ಬದಲು ಹೇಳಬೇಕು ‘ವಂದೇ ಮಾತರಂ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ಅಧಿಕಾರಿಗಳು ‘ಹಲೋ’ ಬದಲು ಹೇಳಬೇಕು ‘ವಂದೇ ಮಾತರಂ’

ದೇಶ, ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಸಂಭ್ರಮದಲ್ಲಿದೆ. ಇದೇ ಸಂದರ್ಭದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಮಹತ್ವದ ತೀರ್ಮಾನವೊಂದನ್ನು ಕೈಗೊಳ್ಳಲು ಮುಂದಾಗಿದೆ.

ಮಹಾರಾಷ್ಟ್ರದ ಸರ್ಕಾರಿ ಅಧಿಕಾರಿಗಳು ಇನ್ನು ಮುಂದೆ ಕಚೇರಿ ಅವಧಿಯಲ್ಲಿ ದೂರವಾಣಿ ಕರೆ ಸ್ವೀಕರಿಸುವ ವೇಳೆ ಹಲೋ ಬದಲು ‘ವಂದೇ ಮಾತರಂ’ ಎಂದು ಹೇಳಬೇಕಿದೆ. ಈ ಕುರಿತು ಆಗಸ್ಟ್ 18ರಂದು ಆದೇಶ ಹೊರಡಿಸಲಾಗುತ್ತದೆ.

ಮಹಾರಾಷ್ಟ್ರ ಸರ್ಕಾರದ ಸಂಸ್ಕೃತಿ ಸಚಿವ ಸುಧೀರ್ ಈ ಮಾಹಿತಿ ನೀಡಿದ್ದು, ಮುಂದಿನ ವರ್ಷದ ಜನವರಿ 26ರ ವರೆಗೆ ಇದನ್ನು ಸರ್ಕಾರಿ ಅಧಿಕಾರಿಗಳು ಪಾಲಿಸಬೇಕಾಗಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...