alex Certify ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆಗೆ ತಡೆ ವದಂತಿ ಬಗ್ಗೆ ಸ್ಪಷ್ಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆಗೆ ತಡೆ ವದಂತಿ ಬಗ್ಗೆ ಸ್ಪಷ್ಟನೆ

ಬೆಂಗಳೂರು: ಕರ್ನಾಟಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 1242 ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆಗೆ ಹೈಕೋರ್ಟ್ ತಡೆ ನೀಡಿದೆ ಎನ್ನುವ ಸುದ್ದಿ ಹರಿದಾಡಿದೆ.

ಈ ಬಗ್ಗೆ ‘ಕನ್ನಡ ದುನಿಯಾ’ದಲ್ಲಿಯು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಗೆ ಹೈಕೋರ್ಟ್ ತಡೆ ನೀಡಿದೆ ಎಂದು ವರದಿಯಾಗಿತ್ತು. ಹೈಕೋರ್ಟ್ ಪರೀಕ್ಷೆಗೆ ತಡೆ ನೀಡಿರುವುದಿಲ್ಲ. ಎಂದಿನಂತೆ ಪರೀಕ್ಷೆಗಳು ನಡೆಯುತ್ತಿವೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ಮಾರ್ಚ್ 12 ರಿಂದ 16 ರವರೆಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಲು ಕಟ್ಟುನಿಟ್ಟಿನ ಕ್ರಮಕೈಗೊಂಡಿದೆ.

ಅಭ್ಯರ್ಥಿಗಳು ಯಾವುದೇ ಗೊಂದಲಕ್ಕೀಡಾಗದೆ, ವದಂತಿಯನ್ನು ನಂಬದೆ ಪರೀಕ್ಷೆಯನ್ನು ಬರೆಯಬೇಕೆಂದು ಕೋರಲಾಗಿದೆ. ಈ ಕುರಿತಾಗಿ ನಮ್ಮ ವೆಬ್ಸೈಟ್ನಲ್ಲಿ ಮಾಹಿತಿ ಪ್ರಕಟವಾಗಿದ್ದು ಇದಕ್ಕಾಗಿ ವಿಷಾದಿಸುತ್ತೇವೆ. ಆದ ತಪ್ಪಿಗೆ ಕ್ಷಮೆ ಯಾಚಿಸುತ್ತೇವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...