alex Certify ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ; ಅಚ್ಚರಿ ಮೂಡಿಸಿದ ಯಡಿಯೂರಪ್ಪ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ; ಅಚ್ಚರಿ ಮೂಡಿಸಿದ ಯಡಿಯೂರಪ್ಪ ಹೇಳಿಕೆ

ವಿಧಾನ ಸಭಾ ಚುನಾವಣೆಗೆ ಕೆಲ ತಿಂಗಳುಗಳಷ್ಟೇ ಬಾಕಿ ಇರುವ ಮಧ್ಯೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ 2023ರ ವಿಧಾನಸಭಾ ಚುನಾವಣೆಯನ್ನು ಎದುರಿಸುವುದಾಗಿ ತಿಳಿಸಿದ್ದರು.

ಈ ನಡುವೆ ಸೋಮವಾರದಂದು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮುಂದಿನ ವಿಧಾನಸಭಾ ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲಿ ಎದುರಿಸುವುದಾಗಿ ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಕೆಲ ದಿನಗಳ ಹಿಂದೆ ರಾಜ್ಯಕ್ಕೆ ಭೇಟಿ ನೀಡಿದ್ದ ಗೃಹ ಸಚಿವ ಅಮಿತ್ ಶಾ, ಯಡಿಯೂರಪ್ಪನವರನ್ನು ಕರೆಯಿಸಿಕೊಂಡು ಮಾತುಕತೆ ನಡೆಸಿದ್ದರು. ಆ ಬಳಿಕ ಯಡಿಯೂರಪ್ಪನವರು ನೀಡಿರುವ ಈ ಹೇಳಿಕೆ ರಾಜ್ಯ ರಾಜಕೀಯ ವಲಯದಲ್ಲಿ ಮತ್ತೊಂದು ಸುತ್ತಿನ ಚರ್ಚೆಗೆ ಕಾರಣವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...