alex Certify ಸಾಹಿತಿ – ಕಲಾವಿದರ ಜೊತೆ ಇಂದು ರಾಹುಲ್ ‘ಸಂವಾದ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾಹಿತಿ – ಕಲಾವಿದರ ಜೊತೆ ಇಂದು ರಾಹುಲ್ ‘ಸಂವಾದ’

‘ಭಾರತ್ ಜೋಡೋ’ ಯಾತ್ರೆ ಕೈಗೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ತಂಡ ಶುಕ್ರವಾರದಂದು ಕರ್ನಾಟಕ ಪ್ರವೇಶಿಸಿದ್ದು, ರಾಜ್ಯ ಕಾಂಗ್ರೆಸ್ ನಾಯಕರು ಗುಂಡ್ಲುಪೇಟೆಯಲ್ಲಿ ಅವರನ್ನು ಬರ ಮಾಡಿಕೊಂಡಿದ್ದಾರೆ.

ಬಳಿಕ ಸಾರ್ವಜನಿಕ ಸಭೆ ನಡೆದಿದ್ದು, ಈ ವೇಳೆ ಸೋಲಿಗರು ಹಾಗೂ ಚಾಮರಾಜನಗರ ಆಕ್ಸಿಜನ್ ದುರಂತ ಕುಟುಂಬಸ್ಥರನ್ನು ರಾಹುಲ್ ಗಾಂಧಿ ಭೇಟಿಯಾಗಿದ್ದಾರೆ. ಭಾರತ್ ಜೋಡೋ ಯಾತ್ರೆ ಇಂದು ಎರಡನೇ ದಿನಕ್ಕೆ ಕಾಲಿಟ್ಟಿದೆ.

ರಾಹುಲ್ ಗಾಂಧಿ ಇಂದು ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಕಳಲೆ ಗೇಟ್ ಬಳಿ ಸಾಹಿತಿಗಳು ಹಾಗೂ ಕಲಾವಿದರ ಜೊತೆ ಸಂವಾದ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬೆಳಿಗ್ಗೆ 11:00 ಗಂಟೆಗೆ ಯಾತ್ರೆ ಕಳಲೆ ಗೇಟ್ ತಲುಪಲಿದ್ದು, ಈ ಸಂದರ್ಭದಲ್ಲಿ ದ್ವೇಷ ರಾಜಕಾರಣದ ವಿರುದ್ಧ ಹೋರಾಟ ನಡೆಸುತ್ತಿರುವ ಸಾಹಿತಿಗಳು ಹಾಗೂ ಕಲಾವಿದರನ್ನು ರಾಹುಲ್ ಗಾಂಧಿ ಭೇಟಿಯಾಗಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...