ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯರ ಅಪರ ಕಾರ್ಯದರ್ಶಿಯಾಗಿ ನಿವೃತ್ತ ಐ.ಎ.ಎಸ್ ಅಧಿಕಾರಿ ಜಿಯಾವುಲ್ಲಾ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಜಿಯಾವುಲ್ಲಾ, ಐ.ಎ.ಎಸ್ (ನಿವೃತ್ತ) ಬೆಂಗಳೂರು, ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮಾನ್ಯ ಮುಖ್ಯಮಂತ್ರಿಯವರ ಪದಾವಧಿಯವರೆಗೆ ಅಥವಾ ಮುಂದಿನ ಆದೇಶದವರೆಗೆ, ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಮುಖ್ಯಮಂತ್ರಿಯವರ ಅವರ ಕಾರ್ಯದರ್ಶಿಯಾಗಿ ಗುತ್ತಿಗೆ ಆಧಾರದ ಮೇಲೆ ನೇಮಿಸಿ ಆದೇಶಿಸಿದೆ.
ಎಸ್. ಜಿಯಾವುಲ್ಲಾ, ಇವರ ಗುತ್ತಿಗೆ ಆಧಾರದ ನೇಮಕಾತಿಗೆ ಸಂಬಂಧಿಸಿದ ಷರತ್ತು ಮತ್ತು ನಿಬಂಧನೆಗಳನ್ನು ಪ್ರತ್ಯೇಕವಾಗಿ ಹೊರಡಿಸಲಾಗುವುದು ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.