alex Certify ಸಿಎಂ ಯಡಿಯೂರಪ್ಪ ಆರೋಗ್ಯ ಸರಿಯಿಲ್ಲ; ರಾಜ್ಯದ ಆಡಳಿತದಲ್ಲಿ ಗೊಂದಲವಿದೆ; ಹೈಕಮಾಂಡ್ ಶೀಘ್ರ ನಿರ್ಧಾರ ಕೈಗೊಳ್ಳಲಿ ಎಂದ ಹೆಚ್. ವಿಶ್ವನಾಥ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಎಂ ಯಡಿಯೂರಪ್ಪ ಆರೋಗ್ಯ ಸರಿಯಿಲ್ಲ; ರಾಜ್ಯದ ಆಡಳಿತದಲ್ಲಿ ಗೊಂದಲವಿದೆ; ಹೈಕಮಾಂಡ್ ಶೀಘ್ರ ನಿರ್ಧಾರ ಕೈಗೊಳ್ಳಲಿ ಎಂದ ಹೆಚ್. ವಿಶ್ವನಾಥ್

ಮೈಸೂರು: ರಾಜ್ಯ ರಾಜಕಾರಣದಲ್ಲಿ ಸ್ವಲ್ಪ ಗೊಂದಲವಿದೆ. ಕೆಲವರು ದೆಹಲಿಗೆ ಹೋಗಿದ್ದಾರೆ. ಇನ್ನು ಕೆಲವರು ಹೇಳಿಕೆಗಳನ್ನು ನೀಡುತ್ತಿದ್ದಾರೆ ಇಂತಹ ಗೊಂದಲಗಳನ್ನು ವರಿಷ್ಠರು ಸರಿಪಡಿಸಬೇಕಿದೆ ಎಂದು ಎಂಎಲ್ಸಿ ಹೆಚ್. ವಿಶ್ವನಾಥ್ ತಿಳಿಸಿದ್ದಾರೆ.

ನಾಯಕತ್ವ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ ವಿಶ್ವನಾಥ್, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಆರೋಗ್ಯ ಸರಿಯಿಲ್ಲ. ಅದರ ಜೊತೆ ರಾಜ್ಯದ ಆಡಳಿತದ ಆರೋಗ್ಯವೂ ಸರಿಯಾಗಬೇಕು. ಹೀಗಾಗಿ ಹೈಕಮಾಂಡ್ ಶೀಘ್ರ ಒಂದು ನಿರ್ಧಾರ ಮಾಡಬೇಕಿದೆ ಎಂದರು.

ಕೆಲವರು ದೆಹಲಿಗೆ ಹೋಗಿ ಬರುತ್ತಿದ್ದಾರೆ, ಇನ್ನು ಕೆಲವರು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇಷ್ಟೆಲ್ಲ ನಡೆಯುತ್ತಿದ್ದರೂ ಯಡಿಯೂರಪ್ಪನವರು ಏನೂ ಮಾತನಾಡುತ್ತಿಲ್ಲ. ಯಾರು ಏನೇ ಮಾಡಿದರೂ ತೀರ್ಮಾನಿಸುವುದು ಹೈಕಮಾಂಡ್. ಹೀಗಾಗಿ ರಾಜ್ಯ ರಾಜಕೀಯ ಗೊಂದಲಗಳ ಬಗ್ಗೆ ಹೈಕಮಾಂಡ್ ಶೀಘ್ರವೇ ಒಂದು ನಿರ್ಧಾರ ಮಾಡಬೇಕಿದೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...