alex Certify ಸಿದ್ದರಾಮಯ್ಯ ಅವರ ಹೇಳಿಕೆಗೆ ಟಾಂಗ್ ಕೊಟ್ಟ HDK | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿದ್ದರಾಮಯ್ಯ ಅವರ ಹೇಳಿಕೆಗೆ ಟಾಂಗ್ ಕೊಟ್ಟ HDK

ಬೆಂಗಳೂರು : ಇತ್ತೀಚೆಗಷ್ಟೇ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಜೆಡಿಎಸ್ ಹಾಗೂ ಕಾಂಗ್ರೆಸ್ ನಿಂದ ನಮ್ಮ ಪಕ್ಷಕ್ಕೆ ಬರಲು ಹಲವರು ಸಿದ್ಧರಾಗಿದ್ದಾರೆ. ಅವರೆಲ್ಲ ಈಗಾಗಲೇ ನನ್ನ ಸಂಪರ್ಕದಲ್ಲಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲಿಯೇ ಮಾಜಿ ಸಿಎಂ ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ.

ಜೆಡಿಎಸ್ ಸೇರುವುದಕ್ಕಾಗಿ ಕಾಂಗ್ರೆಸ್ ಹಾಗೂ ಬಿಜೆಪಿಯಿಂದ ಹಲವರು ಅರ್ಜಿ ಸಲ್ಲಿಸಿದ್ದಾರೆ. ನಮ್ಮ ಪಕ್ಷ ಸೇರುವ ಬಯಕೆ ಅವರಲ್ಲಿ ಹೆಚ್ಚಾಗಿದೆ. ನಮ್ಮ ಸಿದ್ಧಾಂತ ಒಪ್ಪಿ ಬಂದರೆ ಅವರನ್ನೆಲ್ಲ ಸ್ವಾಗತಿಸುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ.

ಬಿಜೆಪಿ ಹಾಗೂ ಕಾಂಗ್ರೆಸ್ ನವರು ಬೇರೆ ಪಕ್ಷಗಳಿಂದ ನಮ್ಮ ಪಕ್ಷಗಳಿಗೆ ಬರಲು ಮುಂದಾಗಿದ್ದಾರೆ ಎಂದು ಹೇಳುತ್ತಿದ್ದಾರೆ. ಆದರೆ, ನಿಮ್ಮ ಜೊತೆಗೆ ಬರುತ್ತಿರುವವರು ಯಾರು ಎಂಬುವುದನ್ನು ಬಹಿರಂಗವಾಗಿ ಹೇಳಬೇಕು ಎಂದು ಸವಾಲು ಹಾಕಿದ್ದಾರೆ.

ಆದರೆ, ನಮ್ಮೊಂದಿಗೆ ಸಣ್ಣ ಮುಖಂಡರು ಬರುತ್ತಿದ್ದಾರೆ. ನಮ್ಮ ಪಕ್ಷದಿಂದ ಯಾರೇ ಹೋದರೂ ನಮಗೆ ಗಾಬರಿ ಹಾಗೂ ಭಯ ಇಲ್ಲ. ಯಾರೇ ಬಂದರೂ, ಬಾರದಿದ್ದರೂ ನಾವು ಪಕ್ಷ ಕಟ್ಟಿ ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...