alex Certify ಸುಮಲತಾ ವಿರುದ್ಧ ಹೆಚ್.ಡಿ.ಕೆ. ಗಂಭೀರ ಆರೋಪ: KRS ಬಿಟ್ಟು ಗಣಿ ಪ್ರದೇಶಕ್ಕೆ ತೆರಳುತ್ತಿರುವುದೇಕೆ ಎಂದು ಪ್ರಶ್ನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸುಮಲತಾ ವಿರುದ್ಧ ಹೆಚ್.ಡಿ.ಕೆ. ಗಂಭೀರ ಆರೋಪ: KRS ಬಿಟ್ಟು ಗಣಿ ಪ್ರದೇಶಕ್ಕೆ ತೆರಳುತ್ತಿರುವುದೇಕೆ ಎಂದು ಪ್ರಶ್ನೆ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ವಾಕ್ಸಮರ ಮುಂದುವರೆದಿದ್ದು, ನಾನು ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ. ಕ್ಷಮೆ ಕೇಳುವಂತಹ ಪದ ಬಳಕೆ ಮಾಡಿಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಕೆ.ಆರ್.ಎಸ್. ಡ್ಯಾಂ ನಲ್ಲಿ ಬಿರುಕು ಬಿಟ್ಟಿದೆ ಎಂದು ಹೇಳಿರುವ ಸುಮಲತಾ ಅವರು ಮಾಧ್ಯಮ ಹಾಗೂ ಅಧಿಕಾರಿಗಳ ತಂಡವನ್ನು ಕರೆದುಕೊಂಡು ಕೆ.ಆರ್.ಎಸ್. ಗೆ ಹೋಗಿ ಪರಿಶೀಲನೆ ನಡೆಸಬೇಕು. ಅದನ್ನು ಬಿಟ್ಟು ಅಲ್ಲೆಲ್ಲೋ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯನ್ನು ಪರಿಶೀಲಿಸಲು ಹೋಗುತ್ತಿರುವುದೇಕೆ ? ದುಡ್ದು ಹೊಡೆಯಲು ಹೋಗುತ್ತಿದ್ದಾರೆಯೇ ? ಗಣಿಗಾರಿಕೆ ಪ್ರದೇಶಕ್ಕೆ ತೆರಳಿ ಪರಿಶೀಲನೆ ಹೆಸರಲ್ಲಿ ಹಣ ಪಡೆದುಕೊಳ್ಳುತ್ತಾರೆ ಅಷ್ಟೇ ಎಂದು ಗಂಭೀರ ಆರೋಪ ಮಾಡಿದ್ದಾರೆ.

BIG BREAKING: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಯ್ತು ʼಮೀಟಿಂಗ್‌ ಸಕ್ಸಸ್”‌ ಎಂಬ ನಿರಾಣಿಯವರ ಹೇಳಿಕೆ

ಇದೇ ವೇಳೆ ಪ್ರಜ್ವಲ್‌ ರೇವಣ್ಣನವರನ್ನು ನೋಡಿ ಕುಮಾರಸ್ವಾಮಿ ಕಲಿಯಲಿ ಎಂಬ ಹೇಳಿಕೆಗೆ ತಿರುಗೇಟು ನೀಡಿದ ಕುಮಾರಸ್ವಾಮಿ, ಪ್ರಜ್ವಲ್‌ ರೇವಣ್ಣ ಹೆಸರು ಪ್ರಸ್ತಾಪಿಸಿ ನಮ್ಮ ಕುಟುಂಬದ ಒಗ್ಗಟ್ಟು ಒಡೆಯುವ ಹುನ್ನಾರ ನಡೆಸಿದ್ದಾರೆ. ಇದಕ್ಕೆಲ್ಲ ನಾನು ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...