alex Certify ಸುಳ್ಳು ಹೇಳಲು ನೊಬೆಲ್ ಪ್ರಶಸ್ತಿ ಕೊಟ್ರೆ ಸಿದ್ದರಾಮಯ್ಯ ಗೆಲ್ತಾರೆ; ತಿರುಗೇಟು ನೀಡಿದ ಸಚಿವ ಈಶ್ವರಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸುಳ್ಳು ಹೇಳಲು ನೊಬೆಲ್ ಪ್ರಶಸ್ತಿ ಕೊಟ್ರೆ ಸಿದ್ದರಾಮಯ್ಯ ಗೆಲ್ತಾರೆ; ತಿರುಗೇಟು ನೀಡಿದ ಸಚಿವ ಈಶ್ವರಪ್ಪ

ಮಂಡ್ಯ: ಜನಸ್ವರಾಜ್ ಅಲ್ಲ ಜನ ಬರ್ಬಾದ್ ಯಾತ್ರೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ರಾಜ್ಯದಲ್ಲಿ ಈಗಾಗಲೇ ಕಾಂಗ್ರೆಸ್ ಸರ್ಕಾರವನ್ನೇ ಕಿತ್ತಾಕಿದ್ದೇವೆ, ಕಾಂಗ್ರೆಸ್ ಬರ್ಬಾದ್ ಆಗಿದೆ. ಹೀಗಿರುವಾಗ ಬಿಜೆಪಿ ಸರ್ಕಾರದ ಬಗ್ಗೆ ಸಿದ್ದರಾಮಯ್ಯನವರ ಹೇಳಿಕೆ ಹಾಸ್ಯಾಸ್ಪದ ಎಂದು ಕಿಡಿಕಾರಿದ್ದಾರೆ.

ರಾಜ್ಯ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನಡುವೆಯೇ ಪೈಪೋಟಿ ಆರಂಭವಾಗಿದೆ. ಇಬ್ಬರ ನಡುವೆ ಪಂದ್ಯ ನಡೆದರೆ ಸಿದ್ದರಾಮಯ್ಯನವರೇ ಗೆಲ್ಲುತ್ತಾರೆ. ಸುಳ್ಳು ಹೇಳಲು ನೊಬೆಲ್ ಪ್ರಶಸ್ತಿ ಇಟ್ರೆ ಸಿದ್ದರಾಯ್ಯನವರೇ ಗೆಲ್ಲುತ್ತಾರೆ ಎಂದರು.

ಪ್ರಧಾನಿ ಮೋದಿ ಸರ್ಕಾರ ಹಳ್ಳಿಗಳಿಗೆ ವ್ಯಾಕ್ಸಿನ್ ಕೊಟ್ಟರೆ ಡಿ.ಕೆ.ಶಿ ಹಾಗೂ ಸಿದ್ದರಾಮಯ್ಯ ವ್ಯಾಕ್ಸಿನ್ ಹಾಕಿಸಿಕೊಳ್ಳಬೇಡಿ. ಅದರಿಂದ ತೊಂದರೆಯಾಗುತ್ತೆ ಎಂದು ಜನರನ್ನು ತಪ್ಪು ದಾರಿಗೆಳೆಯಲು ಮುಂದಾದರು. ಕೊನೆಗೆ ಜನರೇ ಜಾಗೃತರಾಗಿ ವ್ಯಾಕ್ಸಿನ್ ಹಾಕಿಸಿಕೊಂಡರು. ಸ್ವತ: ಸಿದ್ದರಾಮಯ್ಯ, ಡಿ.ಕೆ.ಶಿ ಬೆಂಬಲಿಗರೇ ಬಂದು ಲಸಿಕೆ ಪಡೆದರು. ದೇಶದಲ್ಲಿ ಪ್ರತಿಯೊಬ್ಬರೂ ಪ್ರಧಾನಿ ಮೋದಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಕಾಂಗ್ರೆಸ್ ನಾಯಕರು ಏಕವಚನದಲ್ಲಿ ಮೋದಿ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...