alex Certify ಸೆ.19ರಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ; ಇಂದಿನಿಂದ 3 ದಿನ ಮತ್ತೆ ಅರುಣ್ ಸಿಂಗ್ ರಾಜ್ಯ ಪ್ರವಾಸ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೆ.19ರಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ; ಇಂದಿನಿಂದ 3 ದಿನ ಮತ್ತೆ ಅರುಣ್ ಸಿಂಗ್ ರಾಜ್ಯ ಪ್ರವಾಸ

ಬೆಂಗಳೂರು; ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಇಂದಿನಿಂದ ಮೂರು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ಪ್ರಮುಖವಾಗಿ ಬೆಣ್ಣೆ ನಗರಿ ದಾವಣಗೆರೆಯಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.

ದಾವಣಗೆರೆಯಲ್ಲಿ ನಾಳೆ ಸೆ.18ರಂದು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಹಾಗೂ ಸೆ.19ರಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಇಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ನಾಳೆ ಜಿಲ್ಲೆಯಲ್ಲಿ ಬಿಜೆಪಿ ವಿಭಾಗೀಯ ಪ್ರಭಾರಿಗಳ ಸಭೆ, ರಾಜ್ಯ ಪ್ರದಾನಕಾರ್ಯದರ್ಶಿಗಳ ಸಭೆ, ಪದಾಧಿಕಾರಿಗಳ ಸಭೆ ಕೂಡ ನಡೆಯಲಿದೆ.

ಸಾವಿನ ನಂತ್ರ ಹಲ್ಲು ಕಿತ್ತಿಟ್ಟುಕೊಳ್ತಾರೆ ಸಂಬಂಧಿಕರು….!

ಸೆ.19ರಂದು ಬೆಳಿಗ್ಗೆ 10:30ಕ್ಕೆ ದಾವಣಗೆರೆ ನಗರದ ತ್ರಿಶೂಲ ಕಲಾಭವನದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಆಯೋಜಿಸಲಾಗಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, 99 ಶಾಸಕರು, 18 ಸಂಸದರು, ನಾಲ್ವರು ರಾಜ್ಯಸಭಾ ಸದಸ್ಯರು ಸೇರಿ 572 ಜನರು ಕಾರ್ಯಕಾರಿಣಿಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...