ಗ್ರಾಮೀಣ ಕೃಪಾಂಕ ರಹಿತ ಸರ್ಕಾರಿ ಶಾಲಾ ಶಿಕ್ಷಕರ ಬಹುದಿನಗಳ ಬೇಡಿಕೆಯೊಂದು ಶೀಘ್ರದಲ್ಲೇ ಈಡೇರುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮುಂದಡಿ ಇಟ್ಟಿದ್ದು, ಮಾಹಿತಿಗಳನ್ನು ಕಲೆ ಹಾಕುತ್ತಿದೆ ಎಂದು ತಿಳಿದುಬಂದಿದೆ.
ಕೃಪಾಂಕರಹಿತವಾಗಿ ನೇಮಕಗೊಂಡಿರುವ ಶಾಲಾ ಶಿಕ್ಷಕರಿಗೆ ಸೇವಾ ಹಿರಿತನ ನಿಗದಿಪಡಿಸಬೇಕೆಂಬ ಬೇಡಿಕೆ ಈ ಹಿಂದಿನಿಂದಲೂ ಕೇಳಿ ಬರುತ್ತಿದ್ದು, ಇದನ್ನು ಪರಿಗಣಿಸಿರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಅಗತ್ಯ ಮಾಹಿತಿಗಳನ್ನು ಕಲೆ ಹಾಕುತ್ತಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರು ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರವರಿಗೆ ಪತ್ರ ಬರೆದಿದ್ದು, 2003ರ ನಂತರ ನೇಮಕಗೊಂಡಿರುವ ಗ್ರಾಮೀಣ ಕೃಪಾಂಕ ರಹಿತ ಶಿಕ್ಷಕರ ವಿವರ ಕೇಳಿದ್ದಾರೆ ಎನ್ನಲಾಗಿದೆ.