alex Certify ಸೈನಿಕ ಹುಳು ಬಾಧೆಗೆ 800 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ‘ಮೆಕ್ಕೆ ಜೋಳ’ ನಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೈನಿಕ ಹುಳು ಬಾಧೆಗೆ 800 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ‘ಮೆಕ್ಕೆ ಜೋಳ’ ನಾಶ

ಸೈನಿಕ ಹುಳು ಬಾಧೆಗೆ ಎರಡೇ ದಿನಗಳಲ್ಲಿ ಸುಮಾರು 800 ಎಕರೆ ಪ್ರದೇಶದಲ್ಲಿ ಬೆಳೆಯಲಾಗಿದ್ದ ಮೆಕ್ಕೆಜೋಳ ನಾಶವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಆನವಟ್ಟಿ ಹೋಬಳಿಯಲ್ಲಿ ನಡೆದಿದೆ.

ಕೇವಲ ಇನ್ನೊಂದು ತಿಂಗಳಲ್ಲಿ ಕಟಾವು ಮಾಡಬೇಕಿದ್ದ ಮೆಕ್ಕೆಜೋಳ, ಸೈನಿಕ ಹುಳ ಬಾಧೆಗೆ ಈ ರೀತಿ ನಾಶವಾಗಿರುವುದರಿಂದ ರೈತರು ತಲೆ ಮೇಲೆ ಕೈಹೊತ್ತು ಕುಳಿತಿದ್ದಾರೆ. ಸಾಲಸೋಲ ಮಾಡಿ ಈ ಬೆಳೆಯನ್ನು ಬೆಳೆದಿದ್ದು, ಈಗ ಈ ರೀತಿ ಆಗಿರುವುದರಿಂದ ದಿಕ್ಕು ತೋಚದಂತಾಗಿದೆ ಎಂದು ರೈತರು ಹೇಳಿದ್ದಾರೆ.

8 ಅಥವಾ 5 ವರ್ಷಗಳಿಗೊಮ್ಮೆ ಸೈನಿಕ ಹುಳು ಬಾಧೆ ಕಾಣಿಸಿಕೊಳ್ಳುತ್ತದೆ ಎನ್ನಲಾಗಿದ್ದು, ಈ ಹುಳು 800ರಿಂದ 1000 ದಷ್ಟು ಮರಿಗಳು ಹಾಕುತ್ತವೆ ಎನ್ನಲಾಗಿದೆ. ಸೈನಿಕ ಹುಳು ಬಾಧೆಯಿಂದ ಬೆಳೆ ಕಳೆದುಕೊಂಡಿರುವ ರೈತರಿಗೆ ಸರ್ಕಾರ ಪರಿಹಾರ ನೀಡಬೇಕೆಂದು ಆಗ್ರಹಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...