alex Certify ಸ್ಮಶಾನದಲ್ಲಿ ಜೆಸಿಬಿ ಓಡಿಸಿದ ಸಚಿವ ಶ್ರೀರಾಮುಲು…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ಮಶಾನದಲ್ಲಿ ಜೆಸಿಬಿ ಓಡಿಸಿದ ಸಚಿವ ಶ್ರೀರಾಮುಲು…!

ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಶ್ರೀರಾಮುಲು ಅಲ್ಲಿನ ಸ್ಮಶಾನ ಭೂಮಿಗಳ ಅಭಿವೃದ್ಧಿ ಮತ್ತು ಸ್ವಚ್ಛತೆ ಕುರಿತು ಕ್ರಮಕ್ಕೆ ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಭೇಟಿ ನೀಡಿದ್ದ ಅವರು ಸ್ವತಃ ಜೆಸಿಬಿ ಓಡಿಸಿ ಅಚ್ಚರಿ ಮೂಡಿಸಿದ್ದಾರೆ.

ಬಳ್ಳಾರಿ ನಗರದ ತಾಳೂರು ರಸ್ತೆಯ ಹರಿಶ್ಚಂದ್ರ ಘಾಟ್ ನಲ್ಲಿ ಶನಿವಾರ ಬೆಳಿಗ್ಗೆ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿದ್ದು, ಈ ವೇಳೆ ಸಚಿವ ಶ್ರೀರಾಮುಲು ಅವರೇ ಸ್ವತಃ ಜೆಸಿಬಿ ಚಾಲನೆ ಮಾಡಿದ್ದಾರೆ.

ಬಳಿಕ ಮಾತನಾಡಿದ ಅವರು, ಬಳ್ಳಾರಿ ನಗರದ 30 ಸ್ಮಶಾನ ಭೂಮಿಗಳ ಪೈಕಿ 13 ಸ್ಮಶಾನಗಳಲ್ಲಿ ವಿದ್ಯುದ್ದೀಪ, ರಸ್ತೆ, ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದ್ದು, ಇನ್ನುಳಿದ ಸ್ಮಶಾನಗಳ ಅಭಿವೃದ್ಧಿಗೂ ಸಹ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...