alex Certify ‘ಹಾಸನಾಂಬೆ’ ದರ್ಶನಕ್ಕೆ ಹರಿದು ಬಂದ ಜನಸಾಗರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಹಾಸನಾಂಬೆ’ ದರ್ಶನಕ್ಕೆ ಹರಿದು ಬಂದ ಜನಸಾಗರ

ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ನೀಡುವ ಹಾಸನಾಂಬೆ ದೇಗುಲದ ಬಾಗಿಲನ್ನು ಈಗ ಮತ್ತೆ ತೆರೆಯಲಾಗಿದ್ದು, ಭಾನುವಾರದಂದು ರಾಜಕಾರಣಿಗಳು, ಸಿನಿಮಾ ಕಲಾವಿದರು ಹಾಗೂ ಹಿರಿಯ ಅಧಿಕಾರಿಗಳು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ರಾಜ್ಯ, ಹೊರ ರಾಜ್ಯಗಳಿಂದ ಆಗಮಿಸಿದ್ದ ಭಕ್ತರು ದೇವಿಯ ದರ್ಶನ ಪಡೆದಿದ್ದಾರೆ.

ಬೆಳಗ್ಗೆ 6:00 ಗಂಟೆಯಿಂದ ಮಧ್ಯಾಹ್ನ 1:00 ಗಂಟೆವರೆಗೆ ಹಾಗೂ ಮಧ್ಯಾಹ್ನ 3:30 ರಿಂದ ರಾತ್ರಿ 10 ಗಂಟೆಯವರೆಗೆ ಭಕ್ತರಿಗೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದ್ದು, ವೃದ್ಧರು, ಮಕ್ಕಳು, ನವದಂಪತಿ ಸೇರಿದಂತೆ ಬಹುತೇಕರು ಕುಟುಂಬ ಸಮೇತರಾಗಿ ಆಗಮಿಸಿ ದೇವಿಯ ದರ್ಶನ ಪಡೆದಿದ್ದು ವಿಶೇಷ.

ಸಂಸದ ಪ್ರಜ್ವಲ್ ರೇವಣ್ಣ ಸಹ ಭಾನುವಾರದಂದು ದೇವಿಯ ದರ್ಶನ ಪಡೆದಿದ್ದು, ಈ ಹಿಂದೆ ಜಿಲ್ಲಾಧಿಕಾರಿಗಳಾಗಿದ್ದ ಆರ್. ಗಿರೀಶ್ ರವರು ಸಹ ಹಾಸನಾಂಬೆ ದರ್ಶನಕ್ಕೆ ಆಗಮಿಸಿದ್ದರು. ಅಲ್ಲದೆ ನಟ ಕೆ.ಆರ್. ಪೇಟೆ ಶಿವರಾಜ್ ದೇವರ ದರ್ಶನಕ್ಕಾಗಿ ಬಂದಿದ್ದರು. ಭಾನುವಾರ ರಜಾ ದಿನವಾಗಿದ್ದ ಕಾರಣ ಭಾರಿ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Jak se Jak teplota vody Proč semena papriky neklíčí a jak Vědci objevili nejzdravější sacharidy Vepřový jazyk: Tajemství přípravy lahodné lahůdky Odborník na výživu přináší