ಬಾಗಲಕೋಟೆ: ಮುಸ್ಲಿಂ ಹೆಸರಲ್ಲಿ ಫೇಸ್ ಬುಕ್ ಖಾತೆ ತೆರೆದು ಹಿಂದೂಗಳ ಬಗ್ಗೆ ದ್ವೇಷದ ಪೋಸ್ಟ್ ಹಾಕುತ್ತಿದ್ದ ಬ್ಯಾಂಕ್ ಉದ್ಯೋಗಿಯೋರ್ವನನ್ನು ಬಾಗಲಕೋಟೆ ಪೊಲೀಸರು ಬಂಧಿಸಿದ್ದಾರೆ.
ಸಿದ್ಧಾರೂಢ ನೆರಳಿ ಬಂಧಿತ ಆರೋಪಿ. ಈತ ಬ್ಯಾಂಕ್ ಉದ್ಯೋಗಿ ಆಗಿದ್ದು, ಮುಸ್ತಾಕ್ ಅಲಿ ಎಂಬ ಹೆಸರಿನಲ್ಲಿ ಪೋಸ್ಟ್ ಹಾಕುತ್ತಿದ್ದ. ಹಿಂದೂಗಳ ಬಗ್ಗೆ ದ್ವೇಷದ ಬರವಣಿಗೆ ಬರೆದು ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡುತ್ತಿದ್ದ. ಈ ಬಗ್ಗೆ ಹಿಂದೂ ಪರ ಸಂಘಟನೆ ಕಾರ್ಯಕರ್ತರು ದೂರು ನೀಡಿದ್ದರು.
ಚಲಿಸುತ್ತಿದ್ದ ಬಸ್ನಲ್ಲಿ ಶಾಲಾ ಸಹಪಾಠಿಗಳ ಎಣ್ಣೆ ಪಾರ್ಟಿ : ವಿಡಿಯೋ ವೈರಲ್ ಬಳಿಕ ಖಾಕಿ ಅಲರ್ಟ್
ದೂರಿನ ಅನ್ವಯ ಆರೋಪಿ ಸಿದ್ಧಾರೂಡನನ್ನು ಬಾಗಲಕೋಟೆ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.