alex Certify ಲಲಿತ ಕಲಾ ವಸ್ತು ಪ್ರದರ್ಶನದಲ್ಲಿ ಹಿಂದೂ ದೇವರ ಆಕ್ಷೇಪಾರ್ಹ ಚಿತ್ರ; ಗುಜರಾತ್‌ ಕಾಲೇಜಿನಲ್ಲಿ ನಡೆದ ಅಘಾತಕಾರಿ ಸಂಗತಿ ಬಹಿರಂಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಲಿತ ಕಲಾ ವಸ್ತು ಪ್ರದರ್ಶನದಲ್ಲಿ ಹಿಂದೂ ದೇವರ ಆಕ್ಷೇಪಾರ್ಹ ಚಿತ್ರ; ಗುಜರಾತ್‌ ಕಾಲೇಜಿನಲ್ಲಿ ನಡೆದ ಅಘಾತಕಾರಿ ಸಂಗತಿ ಬಹಿರಂಗ

ವಡೋದರಾ ಮೂಲದ ಮಹಾರಾಜ ಸಯಾಜಿರಾವ್​ ವಿಶ್ವವಿದ್ಯಾಲಯವು ತನ್ನ ಲಲಿತ ಕಲಾ ವಿಭಾಗದ ವಸ್ತು ಪ್ರದರ್ಶನ ಕಾರ್ಯಕ್ರಮದ ಬಳಿಕ ವಿವಾದದ ಕೇಂದ್ರ ಬಿಂದುವಾಗಿದೆ. ಈ ವಿಭಾಗದ ಕೆಲವು ವಿದ್ಯಾರ್ಥಿಗಳು ಹಿಂದು ದೇವರ ಆಕ್ಷೇಪಾರ್ಹ ಭಾವಚಿತ್ರಗಳನ್ನು ಪ್ರದರ್ಶಿಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಆರ್​ಎಸ್​ಎಸ್​ ಹಾಗೂ ಎಬಿವಿಪಿ ಸಂಘಟನೆಗಳು ಇದನ್ನು ವಿರೋಧಿಸಿದ್ದು ಡೀನ್​ ರಾಜೀನಾಮೆಗೆ ಆಗ್ರಹಿಸಿವೆ.

ಲಲಿತ ಕಲಾ ವಿಭಾಗದ ವಾರ್ಷಿಕ ಚಿತ್ರಕಲಾ ಪ್ರದರ್ಶನದಲ್ಲಿ ವಿದ್ಯಾರ್ಥಿಗಳು ವಿವಿಧ ವಿಷಯಗಳ ಕುರಿತು ಕಲಾಕೃತಿಗಳನ್ನು ಸಿದ್ಧಪಡಿಸಿದ್ದರು. ಆದರೆ ಇವುಗಳಲ್ಲಿ ಕೆಲವು ಕಲಾಕೃತಿಗಳು ಆಕ್ರೋಶಕ್ಕೆ ಕಾರಣವಾಗಿವೆ. ಕೆಲವು ವಿದ್ಯಾರ್ಥಿಗಳು ಹಿಂದೂ ದೇವತೆಗಳ ಚಿತ್ರಗಳನ್ನು ಫ್ರೇಮ್​​ನ ಒಳಗೆ ಬಿಡಿಸಿದ್ದರೆ ಇನ್ನೂ ಕೆಲವರು ದೇವರ ನಗ್ನ ಚಿತ್ರಗಳನ್ನು ರಚಿಸಿದ್ದಾರೆ. ಫ್ರೇಮ್​ನ ಒಳಗೆ ಪೇಪರ್​ ಕಟ್ಟಿಂಗ್​ನಿಂದ ದೇವರ ಆಕೃತಿಯನ್ನು ರಚಿಸಲಾಗಿತ್ತು. ಇದಕ್ಕೆ ಬಳಕೆ ಮಾಡಲಾದ ಪತ್ರಿಕೆಗಳು ಅತ್ಯಾಚಾರದ ಸುದ್ದಿಗಳನ್ನು ಒಳಗೊಂಡಿದ್ದವು.

ಈ ವಿಚಾರ ಬೆಳಕಿಗೆ ಬರುತ್ತಿದ್ದಂತೆಯೇ ಎಬಿವಿಪಿ ಕಾರ್ಯಕರ್ತರು ಡೀನ್​ ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದಾರೆ. ಅಲ್ಲದೇ ಈ ಕೃತ್ಯ ಎಸಗಿದ ವಿದ್ಯಾರ್ಥಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ. ಈ ಸಂಬಂಧ ಎಬಿವಿಪಿ ಕಾರ್ಯಕರ್ತರು ಡೀನ್​ ಹಾಗೂ ಉಪಕುಲಪತಿಗಳಿಗೆ ಮನವಿ ಸಲ್ಲಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...