alex Certify ಹಿಜಾಬ್​ ಪರ ಕೋರ್ಟ್‌ ಮೆಟ್ಟಿಲೇರಿದ್ದ ವಿದ್ಯಾರ್ಥಿನಿ ಸಹೋದರನ ಮೇಲೆ ಹಲ್ಲೆ ನಡೆಸಿದ್ದ ಮೂವರಿಗೆ ಜಾಮೀನು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಿಜಾಬ್​ ಪರ ಕೋರ್ಟ್‌ ಮೆಟ್ಟಿಲೇರಿದ್ದ ವಿದ್ಯಾರ್ಥಿನಿ ಸಹೋದರನ ಮೇಲೆ ಹಲ್ಲೆ ನಡೆಸಿದ್ದ ಮೂವರಿಗೆ ಜಾಮೀನು

ಹಿಜಾಬ್​ ಹೋರಾಟಗಾರ್ತಿ ವಿದ್ಯಾರ್ಥಿನಿ ಹಾಜ್ರಾ ಶಿಫಾ ಪೋಷಕರ ಹೋಟೆಲ್​ ಮೇಲೆ ದಾಳಿ ನಡೆಸಿದ್ದು ಮಾತ್ರವಲ್ಲದೇ ಶಿಫಾ ಸಹೋದರನ ಮೇಲೆ ಹಲ್ಲೆ ನಡೆಸಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳು ಸ್ಟೇಷನ್​ ಜಾಮೀನಿನ ಮೇಲೆ ಹೊರಬಂದಿದ್ದಾರೆ.

ಹೋಟೆಲ್​ ಮೇಲೆ ಕಲ್ಲು ಎಸೆದಿದ್ದ ಮಲ್ಪೆಯ ಮಂಜು ಸಾಲಿಯನ್‌ ಅಲಿಯಾಸ್ ಮನೋಜ್, ದೀಪಕ್ ಸಾಲಿಯಾನ್‌ ಹಾಗೂ ಸನಿಲ್ ರಾಜ್ ಎಂಬವರನ್ನು ಮಲ್ಪೆ ಠಾಣಾ ಪೊಲೀಸರು ನಿನ್ನೆ ಬಂಧಿಸಿದ್ದರು.

ಮಲ್ಪೆಯಲ್ಲಿರುವ ಬಿಸ್ಮಿಲ್ಲಾ ಹೋಟೆಲ್​ಗೆ ನುಗ್ಗಿದ್ದ ಗುಂಪೊಂದು ಹೋಟೆಲ್​ನ ಕಿಟಕಿ ಗಾಜುಗಳನ್ನು ಒಡೆದಿದ್ದು ಮಾತ್ರವಲ್ಲದೇ ವಿದ್ಯಾರ್ಥಿನಿ ಶಿಫಾಳ ಸಹೋದರ ಸೈಫ್​ ಮೇಲೆ ಹಲ್ಲೆ ನಡೆಸಿ ಎಸ್ಕೇಪ್​ ಆಗಿದ್ದರು. ಹಲ್ಲೆಯಿಂದ ಗಾಯಗೊಂಡಿದ್ದ ಸೈಫ್​ರನ್ನು ಹೈಟೆಕ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇನ್ನು ಈ ಘಟನೆ ಸಂಬಂಧ ಟ್ವೀಟಾಯಿಸಿದ್ದ ವಿದ್ಯಾರ್ಥಿನಿ ಶಿಫಾ, ಹಿಜಾಬ್ ಪರವಾಗಿ ಹೋರಾಟ ನಡೆಸಿದ್ದಕ್ಕೆ ದುಷ್ಕರ್ಮಿಗಳು ನನ್ನ ಸಹೋದರನ ಮೇಲೆ ಹಲ್ಲೆ ನಡೆಸಿದ್ದಾರೆ. ಹೋಟೆಲ್ ಧ್ವಂಸಗೊಳಿಸಿದ್ದಾರೆ. ನಮ್ಮ ಹಕ್ಕಿಗಾಗಿ ನಾವು ಧ್ವನಿ ಎತ್ತುವುದು ತಪ್ಪೇ..? ಸಂಘಪರಿವಾರಗಳ ಈ ಗೂಂಡಾಗಿರಿಯ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಟ್ವೀಟಾಯಿಸಿದ್ದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...