alex Certify ಹಿಜಾಬ್​ ವಿಚಾರದಲ್ಲಿ ರಾಜ್ಯ ಹೈಕೋರ್ಟ್​ ತೀರ್ಪನ್ನು ಸ್ವಾಗತಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಿಜಾಬ್​ ವಿಚಾರದಲ್ಲಿ ರಾಜ್ಯ ಹೈಕೋರ್ಟ್​ ತೀರ್ಪನ್ನು ಸ್ವಾಗತಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

 

ಉಡುಪಿಯ ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯರು ತರಗತಿಯೊಳಗೆ ಹಿಜಾಬ್​ ಧರಿಸಲು ಅನುಮತಿ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ವಿವಿಧ ಅರ್ಜಿಗಳನ್ನು ವಜಾಗೊಳಿಸಿದ ಹೈಕೋರ್ಟ್​ನ ಕ್ರಮವನ್ನು ಕೇಂದ್ರ ಸರ್ಕಾರ ಸ್ವಾಗತಿಸಿದೆ.

ತೀರ್ಪನ್ನು ಸ್ವಾಗತಿಸಿದ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ, ನ್ಯಾಯಾಲಯದ ತೀರ್ಪನ್ನು ನಾವು ಸ್ವಾಗತಿಸುತ್ತೇವೆ. ರಾಜ್ಯ ಹಾಗೂ ದೇಶವು ಮುನ್ನೆಡಯಬೇಕು. ಹೈಕೋರ್ಟ್ ಆದೇಶವನ್ನು ಸ್ವೀಕರಿಸುವ ಮೂಲಕ ಎಲ್ಲರೂ ಶಾಂತಿಯನ್ನು ಕಾಪಾಡಬೇಕು ಎಂದು ನಾನು ಪ್ರತಿಯೊಬ್ಬರಲ್ಲೂ ಮನವಿ ಮಾಡುತ್ತೇನೆ. ವಿದ್ಯಾರ್ಥಿಗಳ ಮೂಲಭೂತ ಕೆಲಸವೆಂದರೆ ಅಧ್ಯಯನ ಮಾಡುವುದಾಗಿದೆ. ಇವೆಲ್ಲವನ್ನು ಬಿಟ್ಟು ಅಧ್ಯಯನಕ್ಕಾಗಿ ಅವರೆಲ್ಲ ಒಗ್ಗಟ್ಟಾಗಿರಬೇಕು ಎಂದು ಹೇಳಿದರು.

ಹಿಜಬ್​ ಕಡ್ಡಾಯ ಮಾಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್​ ತ್ರಿ ಸದಸ್ಯ ಪೀಠ, ಮುಸ್ಲಿಂ ಮಹಿಳೆಯರು ಹಿಜಾಬ್ ಧರಿಸುವುದು ಇಸ್ಲಾಮಿಕ್​ ಧರ್ಮದ ನಂಬಿಕೆಯಲ್ಲಿ ಅಗತ್ಯವಾದ ಧಾರ್ಮಿಕ ಆಚರಣೆಯ ಭಾಗವಾಗಿಲ್ಲ ಎಂದು ಹೇಳಿದೆ.

— ANI (@ANI) March 15, 2022

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...