alex Certify ಹಿರಿಯ ಅಧಿಕಾರಿಗಳ ವಿರುದ್ಧ ಸಿಎಂಗೆ ಪತ್ರ ಬರೆದಿದ್ದ SI ನಾಪತ್ತೆ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಿರಿಯ ಅಧಿಕಾರಿಗಳ ವಿರುದ್ಧ ಸಿಎಂಗೆ ಪತ್ರ ಬರೆದಿದ್ದ SI ನಾಪತ್ತೆ..!

ಮುಂಬೈನ ಪೊಲೀಸ್ ಸಬ್​ಇನ್​​ಸ್ಪೆಕ್ಟರ್​ ಒಬ್ಬರು ತಾವು ಹಿರಿಯ ಭ್ರಷ್ಟ ಅಧಿಕಾರಿಗಳಿಂದ ಕಿರುಕುಳ ಹಾಗೂ ತೊಂದರೆ ಅನುಭವಿಸುತ್ತಿರುವುದಾಗಿ ಪತ್ರದ ಮೂಲಕ ಆರೋಪಿಸಿದ್ದಾರೆ. ಅಧಿಕಾರಿಯನ್ನು ಮನೇಶ್​ ಎಂದು ಗುರುತಿಸಲಾಗಿದ್ದು ಇಬರು ಕಲಾಂಬೋರಿ ಠಾಣೆಗೆ ಸೇರಿದವರಾಗಿದ್ದಾರೆ. ಮನೇಶ್​ ಶನಿವಾರದಿಂದ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.

ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿ ಮನೇಶ್, ಮಹಾರಾಷ್ಟ್ರ ಸಿಎಂ ಉದ್ಧವ್​ ಠಾಕ್ರೆ ಹಾಗೂ ಪೊಲೀಸ್​ ಮಹಾನಿರ್ದೇಶಕ ರಜನೀಶ್​ ಸೇಠ್​ರಿಗೆ ಪತ್ರ ಬರೆದಿದ್ದಾರೆ.

ಕಲಾಂಬೋಲಿ ಪೊಲೀಸ್​ ಠಾಣೆಯ ಹಿರಿಯ ಪೊಲೀಸ್​ ಇನ್​ಸ್ಪೆಕ್ಟರ್​ ಭ್ರಷ್ಟರಾಗಿದ್ದು ವಸೂಲಿಯ ಟಾರ್ಗೆಟ್​ನ್ನು ತಲುಪುವಂತೆ ನಮಗೆ ಕಿರುಕುಳ ನೀಡುತ್ತಿದ್ದಾರೆ. ಇದರಿಂದ ನಮಗೆ ಮಾನಸಿಕವಾಗಿ ಆಘಾತವುಂಟಾಗುತ್ತಿದೆ ಎಂದು ಮನೇಶ್​ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಅಲ್ಲದೇ ತಮ್ಮನ್ನು ಕಲಂಬೋಲಿ ಠಾಣೆಯಿಂದ ವರ್ಗಾವಣೆ ಮಾಡಲಾಗಿದೆ ಎಂದೂ ಹೇಳಿದ್ದಾರೆ.

ಹಿರಿಯ ಪೊಲೀಸ್​ ಅಧಿಕಾರಿಯ ಆಸ್ತಿಯ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ ಹಾಗೂ ಕಲಾಂಬೋಲಿ ಠಾಣೆಯಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳ ಬಗ್ಗೆಯೂ ತನಿಖೆ ನಡೆಸುವಂತೆ ಕೋರಿದ್ದರು.

ಮನೇಶ್​ರ ಈ ಪತ್ರವು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದ್ದಂತೆಯೇ ಕಲಂಬೋಲಿ ಪೊಲೀಸರು ಮನೇಶ್​ಗಾಗಿ ಹುಡುಕಾಟ ನಡೆಸಿದ್ದಾರೆ. ಆದರೆ ಮನೇಶ್​ ಮಾತ್ರ ಕಣ್ಮರೆಯಾಗಿದ್ದಾರೆ ಎನ್ನಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...