alex Certify ಹೆಂಡತಿ‌ ಕಾಟಕ್ಕೆ ಬೇಸತ್ತು ಗಂಡ ಆತ್ಮಹತ್ಯೆ….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೆಂಡತಿ‌ ಕಾಟಕ್ಕೆ ಬೇಸತ್ತು ಗಂಡ ಆತ್ಮಹತ್ಯೆ….!

ಬೆಂಗಳೂರು- ಇತ್ತೀಚಿನ ದಿನಗಳಲ್ಲಿ ಕುಟುಂಬ ಕಲಹದಿಂದ ಪ್ರಾಣ ಕಳೆದುಕೊಳ್ಳುವವರ ಸಂಖ್ಯೆ ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಇದೀಗ ಹೆಂಡತಿ ಕಾಟಕ್ಕೆ ಬೇಸತ್ತು ಗಂಡ ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ. ಎಷ್ಟು ದುಡಿದರೂ ಹಣ ಹಣ ಎನ್ನುತ್ತಿದ್ದ ಹೆಂಡತಿಯ ಕಾಟಕ್ಕೆ ಇದೀಗ ಗಂಡ ಇಹಲೋಕ ತ್ಯಜಿಸಿದ್ದಾನೆ.

ಹೌದು, ಈ ಘಟನೆ ನಡೆದಿರೋದು ಬೆಂಗಳೂರಿನ ಶ್ರೀನಗರ ಬಳಿಯ ಅವಳಹಳ್ಳಿಯಲ್ಲಿ. ಅಣ್ಣಯ್ಯ ಎಂಬಾತ ಆತ್ಮಹತ್ಯೆ ಮಾಡಿಕೊಂಡವರು. ಮಂಡ್ಯದ ನಾಗಮಂಗಲ ಮೂಲದ ಅಣ್ಣಯ್ಯ ಬಾರ್ ಒಂದರಲ್ಲಿ ಕ್ಯಾಶಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದರಂತೆ. ಅಣ್ಣಯ್ಯ ಅವರು ಐದು ವರ್ಷದ ಹಿಂದೆ ಉಮಾ ಎಂಬಾಕೆಯ ಜತೆ ಮದುವೆಯಾಗಿತ್ತು. ಈ ದಂಪತಿಗೆ ಒಂದು ಮಗು ಇತ್ತು ಎಂತಲೂ ಹೇಳಲಾಗಿದೆ.

ಮದುವೆಯಾದ ನಂತರ ಹಣದ ವಿಚಾರಕ್ಕೆ ಸಂಬಂಧಿಸಿ ಯಾವಾಗಲು ಇಬ್ಬರ ನಡುವೆ ಜಗಳ ಆಗುತ್ತಿತ್ತಂತೆ. ಎಷ್ಟು ದುಡಿದರೂ ಹೆಂಡತಿ ದುಡ್ಡು-ದುಡ್ಡು ಎಂದು ಕೇಳುತ್ತಿದ್ದಳು. ನಾನು ಎಷ್ಟು ದುಡಿದರೂ ಸಾಲುತ್ತಿಲ್ಲ ಎನ್ನುತ್ತಿದ್ದಳು. ಇವಳಿಂದ ನನಗೆ ಜೀವನದಲ್ಲಿ ನೆಮ್ಮದಿಯೇ ಇಲ್ಲದಂತೆ ಅಗಿದೆ. ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್‌ನಲ್ಲಿ ಅಣ್ಣಯ್ಯ ಬರೆದಿಟ್ಟಿದ್ದಾರೆ. ಜೊತೆಗೆ ನನ್ನನ್ನು ನನ್ನಕ್ಕ ಹಾಗೂ ಕುಟುಂಬದವರು ಮಣ್ಣು ಮಾಡಬೇಕೆಂದು ಬರೆದಿದ್ದಾರೆ‌.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...