alex Certify ಹೆಡ್ ಕಾನ್ಸ್ ಟೇಬಲ್ ಮೇಲೆ ಹಲ್ಲೆ; 6 ಜನರ ವಿರುದ್ಧ FIR ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೆಡ್ ಕಾನ್ಸ್ ಟೇಬಲ್ ಮೇಲೆ ಹಲ್ಲೆ; 6 ಜನರ ವಿರುದ್ಧ FIR ದಾಖಲು

ಮೈಸೂರು: ಮನೆ ಮುಂದೆ ವಾಹನ ನಿಲ್ಲಿಸಬೇಡಿ ಎಂದಿದ್ದಕ್ಕೆ ಹೆಡ್ ಕಾನ್ಸ್ ಟೇಬಲ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಮೈಸೂರಿನ ಅನುಗ್ರಹ ಬಾರ್ ಆಂಡ್ ರೆಸ್ಟೋರೆಂಟ್ ಸಿಬ್ಬಂದಿಗಳು ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಹರೀಶ್ ಎಂಬುವವರ ಮೇಲೆ ಹಲ್ಲೆ ನಡೆಸಿದ್ದರು. ಹಲ್ಲೆ ನಡೆಸಿರುವ ದೃಶ್ಯ ಸಿ.ಸಿ. ಟಿವಿಯಲ್ಲಿ ಸೆರೆಯಾಗಿದೆ. ಹರೀಶ್ ಮನೆ ಬಳಿಯೇ ಬಾರ್ ಆಂಡ್ ರೆಸ್ಟೋರೆಂಟ್ ಇದ್ದು, ಅಲ್ಲಿನ ಸಿಬ್ಬಂದಿಗಳು ಮನೆ ಮುಂದೆ ವಾಹನ ನಿಲ್ಲಿಸುತ್ತಿದ್ದರು. ಈ ಬಗ್ಗೆ ಪ್ರಶ್ನಿಸಿದ್ದಕ್ಕೆ ಹೆಡ್ ಕಾನ್ಸ್ ಟೇಬಲ್ ಹರೀಶ್ ಮೇಲೆ ಹಲ್ಲೆ ನಡೆಸಿದ್ದರು.

ಇದೀಗ ಪ್ರಕರಣ ಸಂಬಂಧ ಪುನೀತ್, ವಿನಯ್, ಶ್ರೀಕಾಂತ್ ಸೇರಿದಂತೆ 6 ಜನರ ವಿರುದ್ಧ ಇಲವಾಲ ಪೊಲಿಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...