alex Certify ಹೊಸಪೇಟೆಯಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ: ಸಿಎಂ ಬೊಮ್ಮಾಯಿ ಚಾಲನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೊಸಪೇಟೆಯಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ: ಸಿಎಂ ಬೊಮ್ಮಾಯಿ ಚಾಲನೆ

ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಎರಡು ದಿನಗಳ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಗೆ ಸಿಎಂ ಬಸವರಾಜ್ ಬೊಮ್ಮಾಯಿ ಚಾಲನೆ ನೀಡಿದ್ದಾರೆ. ಒಂದೇ ಮಾತರಂ ಗೀತೆಯ ಮೂಲಕ ಕಾರ್ಯಕಾರಣಿಗೆ ಚಾಲನೆ ನೀಡಲಾಗಿದ್ದು ಶಾಸಕ ನಳಿನ್ ಕುಮಾರ್ ಕಟೀಲ್ ಧ್ವಜಾರೋಹಣ ನೆರವೇರಿಸಿದ್ದಾರೆ.

ಕಾರ್ಯಕಾರಣಿ ಸಭೆಯಲ್ಲಿ ಸಚಿವರು ಶಾಸಕರು ಸಂಸದರು ವಿಧಾನಪರಿಷತ್ ಸಚಿವರು ಮತ್ತು ಬಿಜೆಪಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಸಭೆಗೆ ಈಶ್ವರಪ್ಪ ಮತ್ತು ರಮೇಶ್ ಜಾರಕಿಹೊಳಿ ಗೈರಾಗಿದ್ದಾರೆ.

ವಿಜಯನಗರ ಜಿಲ್ಲೆ ಈ ಭಾಗದ ಬಹು ಬೇಡಿಕೆಯಾಗಿತ್ತು ಆನಂದ್ ಸಿಂಗ್ ಮತ್ತು ಯಡಿಯೂರಪ್ಪ ಅವರು ಶ್ರಮದಿಂದ ಹೊಸ ಜಿಲ್ಲೆ ನಿರ್ಮಾಣ ಮಾಡಿದ್ದಾರೆ. ಅವರ ಹೆಸರು ಎಂದೆಂದಿಗೂ ಅಜರಾಮರ ಎಂದು ಸಭೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ವಿಜಯನಗರ ಬಹಳ ಗಟ್ಟಿ ಆಗಿರುವ ಭೂಮಿ ಹಿಂದೂ ಸಮಾಜವನ್ನು ರಕ್ಷಿಸುವ ಪರಾಕ್ರಮ ಭೂಮಿ ಇಲ್ಲಿ ಮಾಡುವ ಸಂಕಲ್ಪ ಗಟ್ಟಿಯಾಗಿ ನಿಲ್ಲುತ್ತದೆ ಎಂದು ಹೊಸಪೇಟೆಯಲ್ಲಿ ಬೊಮ್ಮಾಯಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...