alex Certify ಶ್ರೀನಗರದ ಜನನಿಬಿಡ ಮಾರ್ಕೆಟ್ ನಲ್ಲಿ ಸೇನೆ ಗುರಿಯಾಗಿಸಿ ಗ್ರೆನೇಡ್ ದಾಳಿ: ಓರ್ವ ಸಾವು, 20 ಜನರಿಗೆ ಗಾಯ, ಪ್ರದೇಶ ಸುತ್ತುವರೆದ ಯೋಧರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶ್ರೀನಗರದ ಜನನಿಬಿಡ ಮಾರ್ಕೆಟ್ ನಲ್ಲಿ ಸೇನೆ ಗುರಿಯಾಗಿಸಿ ಗ್ರೆನೇಡ್ ದಾಳಿ: ಓರ್ವ ಸಾವು, 20 ಜನರಿಗೆ ಗಾಯ, ಪ್ರದೇಶ ಸುತ್ತುವರೆದ ಯೋಧರು

ಶ್ರೀನಗರ: ಶ್ರೀನಗರದ ಜನನಿಬಿಡ ಮಾರುಕಟ್ಟೆಯ ಮಧ್ಯದಲ್ಲಿ ಭಯೋತ್ಪಾದಕರು ಭಾನುವಾರ ಗ್ರೆನೇಡ್ ಎಸೆದ ಪರಿಣಾಮ ನಾಗರಿಕರೊಬ್ಬರು ಸಾವನ್ನಪ್ಪಿದ್ದಾರೆ. 20 ಮಂದಿ ಗಾಯಗೊಂಡಿದ್ದಾರೆ.

ಗ್ರೆನೇಡ್ ದಾಳಿಯಲ್ಲಿ ಗಾಯಗೊಂಡವರಲ್ಲಿ ಒಬ್ಬ ಪೋಲೀಸ್ ಸಹ ಸೇರಿದ್ದಾರೆ. ಸಂಜೆ 4:20 ರ ಸುಮಾರಿಗೆ, ಹರಿ ಸಿಂಗ್ ಹೈ ಸ್ಟ್ರೀಟ್‌ ನಲ್ಲಿ ನಿಯೋಜಿಸಿದ್ದ ಪೋಲಿಸ್ ಮತ್ತು ಭದ್ರತಾ ಪಡೆಗಳ ಗುರಿಯಾಗಿಸಿಕೊಂಡು ಭಯೋತ್ಪಾದಕರು ಗ್ರೆನೇಡ್ ಎಸೆದರು ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಸ್ಫೋಟದಲ್ಲಿ ಓರ್ವ ಪೊಲೀಸ್ ಮತ್ತು 20 ನಾಗರಿಕರಿಗೆ ಗಾಯಗಳಾಗಿದ್ದು, ಅವರನ್ನು ಶ್ರೀ ಮಹಾರಾಜ ಹರಿ ಸಿಂಗ್(SMHS) ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಆದರೆ, ಚಿಕಿತ್ಸೆ ಫಲಿಸದೇ ಒಬ್ಬ ನಾಗರಿಕ ಸಾವನ್ನಪ್ಪಿದ್ದಾರೆ.

ಭಯೋತ್ಪಾದಕರು ಗ್ರೆನೇಡ್ ಅನ್ನು ಲಾಬ್ ಮಾಡಿದಾಗ ಸಾಕಷ್ಟು ರಶ್ ಇತ್ತು. 71 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದು, ಒಬ್ಬ ಯುವತಿಯ ಸ್ಥಿತಿ ಗಂಭೀರವಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ರಾಕೇಶ್ ಬಲ್ವಾಲ್ ತಿಳಿಸಿದ್ದಾರೆ.

ಇಡೀ ಪ್ರದೇಶವನ್ನು ಸುತ್ತುವರಿದಿದ್ದು, ಆರೋಪಿಗಳ ಪತ್ತೆಗೆ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ನಾನು ಈ ದಾಳಿಯನ್ನು ಪ್ರಬಲವಾಗಿ ಖಂಡಿಸುತ್ತೇನೆ. ಮೃತರಿಗೆ ಸಂತಾಪಗಳು, ಗಾಯಾಳುಗಳು ಸಂಪೂರ್ಣ ಮತ್ತು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಟ್ವೀಟ್ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...