
ನವದೆಹಲಿ: ಅಹಮದಾಬಾದ್-ವಡೋದರಾ ಎಕ್ಸ್ ಪ್ರೆಸ್ ವೇಯ ನಾಡಿಯಾಡ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 10 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ವಡೋದರಾದಿಂದ ಅಹಮದಾಬಾದ್ಗೆ ತೆರಳುತ್ತಿದ್ದ ಕಾರ್ ಹಿಂಬದಿಯಿಂದ ಟ್ಯಾಂಕರ್ ಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.
ಅಪಘಾತದ ನಂತರ, ವಡೋದರಾ-ಅಹಮದಾಬಾದ್ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು. ಡಿಕ್ಕಿ ಹೊಡೆದ ರಭಸಕ್ಕೆ ನಜ್ಜುಗುಜ್ಜಾಗಿದ್ದ ಎರ್ಟಿಗಾ ಕಾರ್ ಕತ್ತರಿಸಿ ತೆರೆದು ದೇಹಗಳನ್ನು ಹೊರತೆಗೆಯಲಾಗಿದೆ.
ಎಂಟು ವ್ಯಕ್ತಿಗಳು ಅಪಘಾತದ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇಬ್ಬರು ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದರು. ವಡೋದರಾದಿಂದ ಅಹಮದಾಬಾದ್ಗೆ ತೆರಳುತ್ತಿದ್ದ ಎರ್ಟಿಗಾ ಕಾರು ಟ್ಯಾಂಕರ್ನ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.
ವಡೋದರಾ-ಅಹಮದಾಬಾದ್ ಎಕ್ಸ್ ಪ್ರೆಸ್ ವೇಯಲ್ಲಿ ತಾಂತ್ರಿಕ ದೋಷ ಕಾರಣ ಟ್ಯಾಂಕರ್ ನಿಲ್ಲಿಸಲಾಗಿತ್ತು ಎಂದು ಖೇಡಾ ಎಸ್ಪಿ ರಾಜೇಶ್ ಗಧ್ವಿ ಬಹಿರಂಗಪಡಿಸಿದ್ದಾರೆ. 10 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಕಾರ್ ನಿಂತಿದ್ದ ಟ್ಯಾಂಕರ್ಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನಿಬ್ಬರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಅವರ ಗಾಯಗಳಿಂದ ಅವರು ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದರು.