alex Certify BREAKING: ಚಲಿಸುತ್ತಿದ್ದ ಬಸ್ ​ಗೆ ತಗುಲಿದ ಬೆಂಕಿ; 12 ಮಂದಿ ಪ್ರಯಾಣಿಕರು ಸಜೀವ ದಹನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಚಲಿಸುತ್ತಿದ್ದ ಬಸ್ ​ಗೆ ತಗುಲಿದ ಬೆಂಕಿ; 12 ಮಂದಿ ಪ್ರಯಾಣಿಕರು ಸಜೀವ ದಹನ

ಖಾಸಗಿ ಬಸ್​​ವೊಂದು ಟ್ಯಾಂಕರ್​ ಟ್ರೇಲರ್​​ಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು ಬಸ್​ನಲ್ಲಿದ್ದ 12 ಮಂದಿ ಪ್ರಯಾಣಿಕರು ಸಜೀವ ದಹನವಾದ ದಾರುಣ ಘಟನೆ ರಾಜಸ್ಥಾನದ ಜರ್ಮರ್ – ಜೋಧಪುರ ಹೆದ್ದಾರಿಯಲ್ಲಿ ಸಂಭವಿಸಿದೆ.

ಅಪಘಾತ ಸಂಭವಿಸುವ ಮುನ್ನ ಖಾಸಗಿ ಬಸ್​ನಲ್ಲಿ 25 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು 10 ಮಂದಿಯ ಮೃತದೇಹವನ್ನು ಬಸ್​ನಿಂದ ಹೊರಕ್ಕೆ ತೆಗೆದಿದೆ.

ವಿಷಯ ತಿಳಿಯುತ್ತಿದ್ದಂತೆಯೇ ಸರ್ಕಾರಿ ಅಧಿಕಾರಿಗಳು ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಈ ದಾರುಣ ಅಪಘಾತದ ಬಳಿಕ ಹೆದ್ದಾರಿಯಲ್ಲಿ ಕೆಲ ಕಾಲ ಟ್ರಾಫಿಕ್​ ಜಾಂ ಉಂಟಾಯ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...