alex Certify ಅಪಾರ್ಟ್ ಮೆಂಟ್ ಗೆ ಬೆಂಕಿ ತಗುಲಿ ಘೋರ ದುರಂತ: 14 ಜನ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಪಾರ್ಟ್ ಮೆಂಟ್ ಗೆ ಬೆಂಕಿ ತಗುಲಿ ಘೋರ ದುರಂತ: 14 ಜನ ಸಾವು

ಜಾರ್ಖಂಡ್‌ ನ ಧನ್‌ ಬಾದ್‌ ನಲ್ಲಿ ಕಟ್ಟಡಕ್ಕೆ ಬೆಂಕಿ ತಗುಲಿ 14 ಮಂದಿ ಸಾವನ್ನಪ್ಪಿದ್ದಾರೆ. ಮಂಗಳವಾರ ಜಾರ್ಖಂಡ್‌ನ ಧನ್‌ ಬಾದ್‌ ನಲ್ಲಿ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು 14 ಜನರು ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿದ್ದಾರೆ.

ಧನ್‌ಬಾದ್‌ನ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಹಲವಾರು ಜನ ಸಿಕ್ಕಿಬಿದ್ದಿರುವ ಶಂಕೆ ಇದೆ. ಕೆಲವು ಸಾವುಗಳೂ ವರದಿಯಾಗಿವೆ. ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಿರುವುದರಿಂದ ನಿಖರ ಸಂಖ್ಯೆಯನ್ನು ಪರಿಶೀಲಿಸಲು ಸಾಧ್ಯವಿಲ್ಲ ಎಂದು ಧನ್‌ ಬಾದ್‌ ನ ಕಾನೂನು ಮತ್ತು ಸುವ್ಯವಸ್ಥೆಯ ಡಿಎಸ್‌ಪಿ ಹೇಳಿದ್ದಾರೆ.

ಕಟ್ಟಡದ ಆರನೇ ಮತ್ತು ಏಳನೇ ಮಹಡಿಯಲ್ಲಿ ಸಿಲುಕಿರುವ ನಿವಾಸಿಗಳನ್ನು ರಕ್ಷಿಸುವಲ್ಲಿ ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ಇದು ಅತ್ಯಂತ ಹೃದಯ ವಿದ್ರಾವಕ ಘಟನೆ ಎಂದು ಮುಖ್ಯಮಂತ್ರಿ ಹೇಮಂತ್ ಸೊರೆನ್ ಹೇಳಿದ್ದಾರೆ. ಜಿಲ್ಲಾಡಳಿತ ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಗಾಯಗೊಂಡ ಎಲ್ಲರಿಗೂ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸೋರೆನ್ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...