alex Certify BIG BREAKING: ವಿಧಾನ ಪರಿಷತ್ 14 ಸದಸ್ಯರು ಅಮಾನತು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ವಿಧಾನ ಪರಿಷತ್ 14 ಸದಸ್ಯರು ಅಮಾನತು

ಬೆಳಗಾವಿ: ಸಭಾಪತಿ ಆದೇಶ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ನ 14 ಸದಸ್ಯರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಬೆಳಗಾವಿ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ವಿಧಾನ ಪರಿಷತ್ ನಲ್ಲಿ ಭೂ ಹಗರಣ ಸಂಬಂಧ ಸಚಿವ ಭೈರತಿ ಬಸವರಾಜ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ್ದರು. ಈ ವೇಳೆ ರಾಜ್ಯ ಸರ್ಕಾರದ ವಿರುದ್ಧ ಸದಸ್ಯರು ಘೋಷಣೆ ಕೂಗಲು ಆರಂಭಿಸಿದ್ದಾರೆ. ಸಭಾಪತಿ ಬಸವರಾಜ್ ಹೊರಟ್ಟಿಯವರು, ಕಾಂಗ್ರೆಸ್ ಸದಸ್ಯರಿಗೆ ಚರ್ಚೆಗೆ ಅವಕಾಶ ನೀಡಲಾಗುವುದು ಧರಣಿ ಕೈಬಿಡುವಂತೆ ಸೂಚಿಸಿದರೂ ಸದನದಲ್ಲಿ ಧರಣಿ ಮುಂದುವರೆಸಿದ್ದಾರೆ.

ಸಭಾಪತಿಗಳ ಆದೇಶ ಉಲ್ಲಂಘನೆ ಹಿನ್ನೆಲೆಯಲ್ಲಿ ಎಸ್.ಆರ್.ಪಾಟೀಲ್, ಬಿ.ಕೆ.ಹರಿಪ್ರಸಾದ್ ಸೇರಿದಂತೆ 14 ಸದಸ್ಯರನ್ನು ಸದನದಿಂದ 1 ದಿನದ ಮಟ್ಟಿಗೆ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...