alex Certify ಗದ್ದೆಯಲ್ಲಿ ಭತ್ತ ನಾಟಿ ವೇಳೆ ಸಿಡಿಲು ಬಡಿದು 15 ಮಹಿಳೆಯರಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗದ್ದೆಯಲ್ಲಿ ಭತ್ತ ನಾಟಿ ವೇಳೆ ಸಿಡಿಲು ಬಡಿದು 15 ಮಹಿಳೆಯರಿಗೆ ಗಾಯ

ಹಾಸನ: ಗದ್ದೆಯಲ್ಲಿ ಭತ್ತದ ಸಸಿ ನಾಟಿ ಮಾಡುವ ವೇಳೆ ಸಿಡಿಲು ಬಡಿದು 15 ಮಹಿಳೆಯರು ಗಾಯಗೊಂಡಿದ್ದಾರೆ. ಒಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಗೊಂಡ ಮಹಿಳೆಯರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಾಸನ ಜಿಲ್ಲೆ ಬೇಲೂರು ತಾಲೂಕಿನ ಕೋರ್ಲಗದ್ದೆ ಗ್ರಾಮದಲ್ಲಿ ಭಾನುವಾರ ಘಟನೆ ನಡೆದಿದೆ. ಕೆ.ಬಿ. ಚಂದ್ರು ಎಂಬವರಿಗೆ ಸೇರಿದ ಗದ್ದೆಯಲ್ಲಿ 25 ಮಂದಿ ಭತ್ತದ ಸಸಿ ನಾಟಿ ಮಾಡುತ್ತಿದ್ದರು. ಈ ವೇಳೆ ದಿಢೀರನೆ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು. ಸಿಡಿಲು ಬಡಿದು 15 ಮಹಿಳೆಯರಿಗೆ ಗಾಯಗಳಾಗಿವೆ.

ಸಿಡಿಲು ಬಡಿದು ಲತಾ(35) ಎಂಬುವರ ಸ್ಥಿತಿ ಗಂಭೀರವಾಗಿದ್ದು, ಗಾಯಗೊಂಡ ಎಲ್ಲಾ ಮಹಿಳೆಯರನ್ನು ಸಕಲೇಶಪುರದ ಕ್ರಾಫರ್ಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...