ಕೋಲಾರದಲ್ಲಿ 17 ವರ್ಷದ ಬಾಲಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ.
ಕರ್ತವ್ಯ ಲೋಪ ಹಾಗೂ ಮಾಹಿತಿ ಕಲೆಹಾಕುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ಎಎಸ್ಐ ಮುನಿರಾಜು, ಕಾನ್ಸ್ಟೇಬಲ್ಗಳಾದ ವಿಷ್ಣು, ಶಿವ ಅವರನ್ನು ಅಮಾನತು ಮಾಡಿ ಕೋಲಾರ ಎಸ್ಪಿ ನಾರಾಯಣ್ ಆದೇಶ ಹೊರಡಿಸಿದ್ದಾರೆ.
17 ವರ್ಷದ ಬಾಲಕನಿಗೆ ಕಿರುಕುಳ ನೀಡಿ ಬರ್ಬರವಾಗಿ ಹತ್ಯೆ
17 ವರ್ಷದ ಬಾಲಕನಿಗೆ ಕಿರುಕುಳ ನೀಡಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರದ ವೀರಾಂಜನೇಯ ನಗರದ ನಿವಾಸಿ ಅರುಣ್ ಸಿಂಗ್ ಅವರ ಪುತ್ರ ಕಾರ್ತಿಕ್ ಸಿಂಗ್ (17) ನನ್ನು ನಗರದ ಪೇಟೆಚಾಮನಹಳ್ಳಿ ಸರ್ಕಾರಿ ಶಾಲೆಯ ಆವರಣದಲ್ಲಿ ಹತ್ಯೆ ಮಾಡಲಾಗಿತ್ತು. ಪ್ರಥಮ ಪಿಯುಸಿ ಓದುತ್ತಿದ್ದ ಬಾಲಕನ ಬಟ್ಟೆ ಬಿಚ್ಚಿಸಿ ಕಿರುಕುಳ ನೀಡಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕಿರುಕುಳ ನೀಡಿದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಘಟನೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು.