alex Certify 2 ವರ್ಷಗಳ ಅವಧಿಯಲ್ಲಿ ಅಗಲಿದ ಮೂವರು ಪ್ರಭಾವಿ ನಾಯಕರು; ಚುನಾವಣೆಗೂ ಮುನ್ನ ಬಿಜೆಪಿಗೆ ಆಘಾತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

2 ವರ್ಷಗಳ ಅವಧಿಯಲ್ಲಿ ಅಗಲಿದ ಮೂವರು ಪ್ರಭಾವಿ ನಾಯಕರು; ಚುನಾವಣೆಗೂ ಮುನ್ನ ಬಿಜೆಪಿಗೆ ಆಘಾತ

ಮುಂದಿನ ವರ್ಷದ ಆರಂಭದಲ್ಲಿ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಯುತ್ತಿದ್ದು, ಇದರ ಮಧ್ಯೆ ಬೆಂಗಳೂರು ನಂತರ ಅತಿ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಬೆಳಗಾವಿಯಲ್ಲಿ ಬಿಜೆಪಿಯ ಮೂವರು ಪ್ರಭಾವಿ ನಾಯಕರು ಎರಡು ವರ್ಷಗಳ ಅವಧಿಯಲ್ಲಿ ಅಗಲಿದ್ದು, ಬಿಜೆಪಿಗೆ ದೊಡ್ಡ ನಷ್ಟವನ್ನುಂಟು ಮಾಡಿದೆ.

ಈ ಮೊದಲು ಕೇಂದ್ರ ಸಚಿವ ಸುರೇಶ್ ಅಂಗಡಿ ಕೋವಿಡ್ ನಿಂದಾಗಿ ಇಹಲೋಕ ತ್ಯಜಿಸಿದ್ದು, ಅವರು ನಾಲ್ಕು ಬಾರಿ ಬೆಳಗಾವಿ ಲೋಕಸಭಾ ಕ್ಷೇತ್ರದ ಸಂಸದರಾಗಿ ಆಯ್ಕೆಯಾಗಿದ್ದರು. ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾಗಿದ್ದ ಸುರೇಶ್ ಅಂಗಡಿ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದ್ದರ ಮಧ್ಯೆ ಕೋವಿಡ್ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಫಲಿಸದೆ ನವದೆಹಲಿಯ ಏಮ್ಸ್ ನಲ್ಲಿ ಮೃತಪಟ್ಟಿದ್ದರು.

ಆ ಬಳಿಕ ರಾಜ್ಯ ವಿಧಾನಸಭೆಗೆ ಅತಿ ಹೆಚ್ಚು ಬಾರಿ ಆಯ್ಕೆಯಾಗಿರುವ ಹೆಗ್ಗಳಿಕೆ ಹೊಂದಿದ್ದ ಉಮೇಶ್ ಕತ್ತಿ ಅವರು ಹೃದಯಾಘಾತದಿಂದ ಸಾವಿಗೀಡಾಗಿದ್ದು, ಇದು ಎಲ್ಲರಿಗೂ ಆಘಾತವನ್ನುಂಟು ಮಾಡಿತ್ತು. ಬೆಳಗಾವಿ ಜಿಲ್ಲೆಯ ಪ್ರಭಾವಿ ನಾಯಕರಾಗಿದ್ದ ಉಮೇಶ್ ಕತ್ತಿ ಮುಂದೊಂದು ದಿನ ತಾನು ಈ ರಾಜ್ಯದ ಮುಖ್ಯಮಂತ್ರಿಯಾಗುವುದಾಗಿ ಹೇಳಿದ್ದು, ಆದರೆ ಹಠಾತ್ ಆಗಿ ವಿಧಿವಶರಾಗಿದ್ದರು.

ಇದೀಗ ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ವಿಧಿವಶರಾಗಿದ್ದು, ಈ ರೀತಿ ಬೆಳಗಾವಿ ಜಿಲ್ಲೆಯ ಲಿಂಗಾಯತ ಸಮುದಾಯದ ಮೂವರು ಪ್ರಭಾವಿ ನಾಯಕರು ಕಳೆದ ಎರಡು ವರ್ಷಗಳಲ್ಲಿ ಅಗಲಿರುವುದು ಬಿಜೆಪಿಗೆ ಆಘಾತ ತಂದಂತಾಗಿದೆ. ಈ ಮೂವರೂ ಸಹ ಬೆಳಗಾವಿ ಜಿಲ್ಲೆಯ ರಾಜಕಾರಣದಲ್ಲಿ ತಮ್ಮದೇ ಆದ ವರ್ಚಸ್ಸು ಹೊಂದಿದ್ದು, ಹೀಗಾಗಿ ಬಿಜೆಪಿಗೆ ತುಂಬಲಾಗದ ನಷ್ಟವಾಗಿರುವುದು ಸುಳ್ಳಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...