alex Certify ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಆರೋಪ ಮಾಡಿದ ತೃಣಮೂಲ ಸಂಸದ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಆರೋಪ ಮಾಡಿದ ತೃಣಮೂಲ ಸಂಸದ

2 Trinamool MPs claim they were attacked in Tripura, one of their aides injuredತ್ರಿಪುರಾ ರಾಜಧಾನಿ ಅಗರ್ತಲಾಗೆ ಭೇಟಿ ಕೊಟ್ಟಿದ್ದ ತೃಣಮೂಲ ಕಾಂಗ್ರೆಸ್‌ನ ಇಬ್ಬರು ಸಂಸದರ ಮೇಲೆ ಹಲ್ಲೆ ನಡೆದಿದೆ.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪಕ್ಷದ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಬಂದಿದ್ದ ಅಪರೂಪ ಪೊದ್ದರ್‌ ಹಾಗೂ ಡೋಲಾ ಸೇನ್‌ ತಾವು ಪ್ರಯಾಣಿಸುತ್ತಿದ್ದ ಕಾರುಗಳನ್ನು ಗುರಿಯಾಗಿಸಿ ದಾಳಿ ಮಾಡಲಾಗಿದೆ. ಘಟನೆಯಲ್ಲಿ ಸಂಸದರ ಬಟ್ಟೆಗಳು ಹರಿದಿದ್ದು, ಇಬ್ಬರಿಗೂ ಗಾಯಗಳಾಗಿವೆ.

“ದಾಳಿಕೋರರು ಬಿಜೆಪಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್‌ ದೇಬ್‌‌ಗೆ ಜೈಕಾರ ಹಾಕುತ್ತಾ ದಾಳಿ ಮಾಡಿದ್ದಾರೆ” ಎಂದು ಸೇನ್ ತಿಳಿಸಿದ್ದಾರೆ.

ಕಾರುಗಳ ಮೇಲೆ ಇಟ್ಟಿಗೆಗಳನ್ನು ಎಸೆದು ಕಿಟಕಿ ಗಾಜುಗಳನ್ನು ಧ್ವಂಸ ಮಾಡಿದ ದಾಳಿಕೋರರು, ತಮ್ಮ ವೈಯಕ್ತಿಕ ಸಹಾಯಕರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಸೇನ್ ತಿಳಿಸಿದ್ದು, ಇಷ್ಟೆಲ್ಲಾ ಆದರೂ ಪೊಲೀಸರು ಮೂಕ ಪ್ರೇಕ್ಷಕರಂತೆ ಇದ್ದರು ಎಂದು ಆಪಾದಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...