alex Certify ಇಂಡಸ್ಟ್ರಿಗೆ ನಟ ದರ್ಶನ್ ಬಂದು 25 ವರ್ಷ ; ಇಂದು `D 25 ಬೆಳ್ಳಿ ಪರ್ವ’ ಕಾರ್ಯಕ್ರಮ ಆಯೋಜನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂಡಸ್ಟ್ರಿಗೆ ನಟ ದರ್ಶನ್ ಬಂದು 25 ವರ್ಷ ; ಇಂದು `D 25 ಬೆಳ್ಳಿ ಪರ್ವ’ ಕಾರ್ಯಕ್ರಮ ಆಯೋಜನೆ

ಮಂಡ್ಯ : ನಟ ದರ್ಶನ್ ಕನ್ನಡ ಇಂಡಸ್ಟ್ರಿಗೆ 25 ವರ್ಷಗಳಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಮಂಡ್ಯದಲ್ಲಿ ಡಿ 25 ಬೆಳ್ಳಿ ಪರ್ವ ಅದ್ದೂರಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಇಂದು ಸಂಜೆ 5 ಗಂಟೆಗೆ ಶ್ರೀರಂಗಪಟ್ಟಣದ ರಂಗನಾಥಸ್ವಾಮಿ ದೇವಸ್ಥಾನದ ಮೈದಾನದಲ್ಲಿ ಆದಿಚುಂಚನಗಿರಿಯ ಶ್ರೀ ನಿರ್ಮಲಾನಂದನಾಥ ಸ್ವಾಮಿ ಸಾನಿಧ್ಯದಲ್ಲಿ ಅಭಿನಂದನಾ ಸಮಾರಂಭ ನಡೆಯಲಿದೆ. ಈ ವೇಳೆ ಸಂಸದೆ ಸುಮಲತಾ ಅಂಬರೀಷ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿರಲಿದ್ದಾರೆ. ಈ ಕಾರ್ಯಕ್ರಮದಲ್ಲಿ ನಟ ದರ್ಶನ್ ಗೆ ಅಭಿಮಾನಿಗಳು ಅಭಿನಂದನೆ ಸಲ್ಲಿಸಲಿದ್ದಾರೆ.

ಶ್ರೀರಂಗಪಟ್ಟಣದತ್ತ ಅಭಿಮಾನಿಗಳ ದಂಡು

ನಟ ದರ್ಶನ್ ಅವರನ್ನು ನೋಡಲು, ಡಿ.25 ಕಾರ್ಯಕ್ರಮದಲ್ಲಿ ಭಾಗಿಯಾಗಲು ಅಭಿಮಾನಿಗಳು , ಸೆಲೆಬ್ರಿಟಿಗಳು ಶ್ರೀರಂಗಪಟ್ಟಣದತ್ತ ಹೆಜ್ಜೆ ಹಾಕುತ್ತಿದ್ದಾರೆ. ಸಂಜೆ ನಡೆಯಲಿರುವ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಭಾಗವಹಿಸುತ್ತಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...