alex Certify ಉತ್ತರ ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ; ಸಿಡಿಲು ಬಡಿದು ಮೂವರ ಸಾವು, ಹಲವರಿಗೆ ಸುಟ್ಟಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉತ್ತರ ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ; ಸಿಡಿಲು ಬಡಿದು ಮೂವರ ಸಾವು, ಹಲವರಿಗೆ ಸುಟ್ಟಗಾಯ

ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆ ಕಾರಣ ಸಿಡಿಲು ಬಡಿದು ಮೂವರು ಸಾವನ್ನಪ್ಪಿದ್ದಾರೆ ಮತ್ತು ಹಲವರಿಗೆ ಸಿಡಿಲಿನಿಂದ ಸುಟ್ಟ ಸುಟ್ಟಗಾಯಗಳಾಗಿವೆ.

ಸಿಡಿಲು ಬಡಿದು ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ಉತ್ತನೂರು ಮೂಲದ ಇಬ್ಬರು ಮೃತಪಟ್ಟಿದ್ದಾರೆ. ಶೇಖರಗೌಡ (32) ಮತ್ತು ಬಸವನಗೌಡ (38) ವಿವಾಹ ಸಮಾರಂಭದಲ್ಲಿ ಪಾಲ್ಗೊಳ್ಳಲು ವಿರುಪಾಪುರ

ಗ್ರಾಮಕ್ಕೆ ತೆರಳಿದ್ದಾಗ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಹೊಸಪೇಟೆ ತಾಲೂಕಿನ ಧರ್ಮಸಾಗರ, ಕುರಗೋಡು ತಾಲೂಕಿನ ಕೋಳೂರು ಮತ್ತು ಸಿರಗುಪ್ಪ ತಾಲೂಕಿನ ಬೊಮ್ಮಲಾಪುರದ ತಲಾ ಒಬ್ಬರಿಗೆ ಗಂಭೀರ ಸುಟ್ಟ ಗಾಯಗಳಾಗಿವೆ.

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಬೆಂಡೋಣಿಯಲ್ಲಿ ವರದಿಯಾದ ಮತ್ತೊಂದು ಘಟನೆಯಲ್ಲಿ, 22 ವರ್ಷದ ರೈತ ತನ್ನ ಜಮೀನಿನಲ್ಲಿ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಮೃತರನ್ನು ಗ್ರಾಮದ ನೂರಹಮ್ಮದ್ ರಾಜಾಸಾಬ್ ಎಂದು ಗುರುತಿಸಲಾಗಿದೆ.
ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಹಲವೆಡೆ ಗುರುವಾರ ಮಧ್ಯರಾತ್ರಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಿದೆ.

ಕಂಪ್ಲಿ ತಾಲೂಕಿನಲ್ಲಿ ಆಲಿಕಲ್ಲು ಮಳೆಗೆ 61 ಎಕರೆಗೂ ಹೆಚ್ಚು ಬಾಳೆ ತೋಟಕ್ಕೆ ಹಾನಿಯಾಗಿದೆ. ಯಮ್ಮಿಗನೂರು ಸಮೀಪದ ತಿಮ್ಮನಕೇರಿ ಕ್ಯಾಂಪ್‌ನಲ್ಲಿ ಸಿಡಿಲು ಬಡಿದು 20 ಎಕರೆಯಲ್ಲಿ ಸಂಗ್ರಹಿಸಿದ ಭತ್ತದ ಬಣವೆ ಸುಟ್ಟು ಕರಕಲಾಗಿದೆ.

ಕುರುಗೋಡು ತಾಲೂಕಿನಲ್ಲಿ ಗುರುವಾರ ಸಂಜೆ ಬೀಸಿದ ಜೋರಾದ ಗಾಳಿಗೆ 20ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿವೆ. ಇದರಿಂದ ತಾಲೂಕಿನ ಹಲವು ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.
ಧಾರವಾಡ, ಗದಗ, ಬೆಳಗಾವಿ ಮತ್ತು ಉತ್ತರ ಕನ್ನಡದ ಕೆಲವು ಭಾಗಗಳಲ್ಲಿ ಗುಡುಗು ಸಹಿತ ತುಂತುರು ಮಳೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...