alex Certify ಯುಗಾದಿ ಹಬ್ಬಕ್ಕೆ ಅತ್ತೆ ಮನೆಗೆ ಬಂದಿದ್ದ ವ್ಯಕ್ತಿಯ ಬರ್ಬರ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯುಗಾದಿ ಹಬ್ಬಕ್ಕೆ ಅತ್ತೆ ಮನೆಗೆ ಬಂದಿದ್ದ ವ್ಯಕ್ತಿಯ ಬರ್ಬರ ಹತ್ಯೆ

ಯುಗಾದಿ ಹಬ್ಬದ ಆಚರಣೆಗೆಂದು ದಾವಣಗೆರೆಯಲ್ಲಿರುವ ತನ್ನ ಅತ್ತೆ ಮನೆಗೆ ಬಂದಿದ್ದ ಹಾನಗಲ್ ಮೂಲದ ವಿವಾಹಿತ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಬೈಚವಳ್ಳಿ ಗ್ರಾಮದ ಮಹಾಂತೇಶ್ ಪುಟ್ಟಪ್ಪ ಚೌರದ ಹತ್ಯೆಗೀಡಾದ ವ್ಯಕ್ತಿಯಾಗಿದ್ದು, ಈತನ ಕಣ್ಣಿಗೆ ಖಾರದ ಪುಡಿ ಎರಚಿ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿದೆ.

ಮದ್ಯ ಸೇವನೆಯ ಚಟ ಹೊಂದಿದ್ದ ಈತ ಬುಧವಾರ ಮನೆಯಿಂದ ಹೊರ ಹೋಗಿದ್ದು, ಎಸ್ ಎಸ್ ಬಡಾವಣೆ ರಿಂಗ್ ರಸ್ತೆಯಲ್ಲಿರುವ ಆಫೀಸರ್ಸ್ ಕ್ಲಬ್ ಬಳಿ ಕೊಲೆ ಮಾಡಲಾಗಿದೆ.

ಬುಧವಾರ ರಾತ್ರಿಯಿಂದ ಗುರುವಾರ ಬೆಳಿಗ್ಗೆಯೊಳಗೆ ಈ ಕೃತ್ಯ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದು, ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...