alex Certify ರೈತರ ಪ್ರತಿಭಟನೆ ವೇಳೆಯಲ್ಲೇ ದುರಂತ: ಐವರು ಅನ್ನದಾತರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರ ಪ್ರತಿಭಟನೆ ವೇಳೆಯಲ್ಲೇ ದುರಂತ: ಐವರು ಅನ್ನದಾತರ ದುರ್ಮರಣ

ನವದೆಹಲಿ: ದೆಹಲಿ ಗಡಿಭಾಗದಲ್ಲಿ ರೈತರ ಹೋರಾಟ ಮುಂದುವರೆದಿದೆ. ಈ ಹೋರಾಟದಲ್ಲಿ ಭಾಗಿಯಾಗಿದ್ದ ಪಂಜಾಬ್ ನ 5 ಮಂದಿ ರೈತರು ಸಾವನ್ನಪ್ಪಿದ್ದಾರೆ.

ನಾಲ್ವರು ರೈತರು ಎರಡು ಪ್ರತ್ಯೇಕ ಅಪಘಾತದಲ್ಲಿ ಸಾವನ್ನಪ್ಪಿದ್ದು, ದೆಹಲಿಯಲ್ಲಿ ಒಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ದೆಹಲಿಯ ಗಡಿ ಭಾಗಗಳಲ್ಲಿ ರೈತರ ಹೋರಾಟ 15 ದಿನಗಳಿಂದ ಮುಂದುವರೆದಿದ್ದು, ಈ ಹೋರಾಟದಲ್ಲಿ ಭಾಗಿಯಾಗಿದ್ದ ಲಾಬ್ ಸಿಂಗ್, ಗುರುಪ್ರೀತ್ ಸಿಂಗ್ ಅವರು ಕರ್ನಾಲ್ ನಲ್ಲಿ ನಡೆದ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಸುಖದೇವ್ ಸಿಂಗ್ ದೀಪ್ ಸಿಂಗ್ ಅವರು ಮೊಹಾಲಿಯ ಫತೇಘರ್ ಸಾಹೀಬ್ ಬಳಿ ನಡೆದ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಮೊಗಾದ ಮಖಾನ್ ಖಾನ್ ದೆಹಲಿಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಕರ್ನಾಲ್ ತರಾರಿ ಫ್ಲೈಓವರ್ ನಲ್ಲಿ ನಡೆದ ಅಪಘಾತದಲ್ಲಿ ಇನ್ನೂ ಹಲವು ರೈತರು ಗಾಯಗೊಂಡಿದ್ದಾರೆ. ನಮ್ಮ ಐದು ಮಂದಿ ರೈತರು ಮೃತಪಟ್ಟಿರುವುದನ್ನು ತಿಳಿದು ದುಃಖವಾಗಿದೆ ಎಂದು ಪಂಜಾಬ್ ಸಿಎಂ ಅಮರಿಂದರ್ ಸಿಂಗ್ ಹೇಳಿದ್ದು, ಮೃತರ ಕುಟುಂಬಗಳಿಗೆ ಪರಿಹಾರದ ಭರವಸೆ ನೀಡಿದ್ದು, ಗಾಯಾಳುಗಳ ಚಿಕಿತ್ಸಾ ವೆಚ್ಚ ಭರಿಸುವುದಾಗಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...