alex Certify 40 ವರ್ಷದ ರಾಜಕೀಯ ಜೀವನದಲ್ಲಿ ಇಂದು ದುಃಖದ ದಿನ; ಬೇಸರ ವ್ಯಕ್ತಪಡಿಸಿದ ಡಿ.ಕೆ. ಶಿವಕುಮಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

40 ವರ್ಷದ ರಾಜಕೀಯ ಜೀವನದಲ್ಲಿ ಇಂದು ದುಃಖದ ದಿನ; ಬೇಸರ ವ್ಯಕ್ತಪಡಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ರಾಜ್ಯದಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ತಾರಕಕ್ಕೇರಿದ್ದು, ಶಿವಮೊಗ್ಗದ ಕಾಲೇಜೊಂದರಲ್ಲಿ ಧ್ವಜ ಸ್ತಂಭದಲ್ಲಿ ಕೇಸರಿ ಬಾವುಟ ಹಾರಾಡಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ರಾಷ್ಟ್ರಧ್ವಜವನ್ನು ಇಳಿಸಿ ಕೇಸರಿ ಧ್ವಜ ಹಾರಿಸಿದ್ದಾರೆ. ರಾಷ್ಟ್ರಧ್ವಜ ಕೆಳಗಿಳಿಸಿದ್ದು ನೋಡಿ ಸಹಿಸಲಾಗಲಿಲ್ಲ. ಇದು ನನ್ನ 40 ವರ್ಷಗಳ ರಾಜಕೀಯ ಜೀವನದಲ್ಲಿ ಅತಿ ದುಃಖದ ದಿನವಾಗಿದೆ ಎಂದರು.

ಮಾಜಿ ಪತ್ನಿಯ ವೆಡ್ಡಿಂಗ್ ಡ್ರೆಸ್ ಧರಿಸಿದ್ದ ನವವಧು: ದಂಪತಿಗಳು ಅರೆಸ್ಟ್….!

ದೇಶ ಕಟ್ಟಲು ಐಕ್ಯತೆಗಾಗಿ ಹಲವರು ಪ್ರಾಣ ಕೊಟ್ಟಿದ್ದಾರೆ. ಆದರೆ ಇಲ್ಲಿ ಮಕ್ಕಳಲ್ಲಿ ಮತೀಯ ವಿಷಬೀಜ ಬಿತ್ತುವ ಕೆಲಸ ನಡೆಸಲಾಗುತ್ತಿದೆ. ರಾಷ್ಟ್ರಧ್ವಜ ಇಳಿಸಿರುವುದಕ್ಕೆ ಯಾರು ಉತ್ತರ ಕೊಡುತ್ತಾರೆ ? ಎಂದು ಪ್ರಶ್ನಿಸಿದ್ದಾರೆ.

ಕಾಲೇಜುಗಳಲ್ಲಿ ಹಲವೆಡೆ ಕಲ್ಲು ತೂರಾಟ, ಲಾಠಿ ಚಾರ್ಜ್ ನಡೆಯುತ್ತಿದೆ. ಒಂದು ವಾರದ ಮಟ್ಟಿಗಾದರೂ ಶಾಲೆಗಳಿಗೆ ರಜೆ ಘೋಷಣೆ ಮಾಡಬೇಕು. ಕಾಲೇಜು ಬಂದ್ ಮಾಡದಿದ್ದರೆ ಅರಾಜಕತೆ ಸೃಷ್ಟಿಯಾಗುತ್ತೆ. ಇಂತದ್ದಕ್ಕೆಲ್ಲ ಸಿಎಂ ಬಸವರಾಜ್ ಬೊಮ್ಮಾಯಿ ಅವಕಾಶ ನೀಡಬಾರದು. ತಕ್ಷಣ ನಡೆಯುತ್ತಿರುವ ಘಟನೆಗಳನ್ನು ನಿಯಂತ್ರಿಸಬೇಕು ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...