BREAKING : ಉದ್ಯಮಿಗೆ 5 ಕೋಟಿ ವಂಚನೆ ಪ್ರಕರಣ : ಮತ್ತೋರ್ವ ಹಿಂದೂ ಕಾರ್ಯಕರ್ತನಿಗೆ ‘CCB’ ಬುಲಾವ್

ಬೆಂಗಳೂರು : ಉದ್ಯಮಿ ಗೋವಿಂದಬಾಬು ಪೂಜಾರಿಗೆ 5 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಹಿಂದೂ ಕಾರ್ಯಕರ್ತ’ನಿಗೆ ಸಿಸಿಬಿ ಬುಲಾವ್ ನೀಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ತುಡಕೂರು ಮಂಜುಗೆ ನಾಳೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಬುಲಾವ್ ನೀಡಿದೆ. ತುಡುಕೂರು ಮಂಜು ಮೂಲಕ ಉದ್ಯಮಿ ಗೋವಿಂದಬಾಬು ಪೂಜಾರಿ ರಮೇಶ್, ಧನರಾಜ್ ಅವರನ್ನು ಭೇಟಿಯಾಗೋದಕ್ಕೆ ಸಹಾಯ ಮಾಡಿದ್ದನು ಎಂದು ಹೇಳಲಾಗಿದೆ. ಅಷ್ಟೇ ಅಲ್ಲದೇ ತುಡುಕೂರು ಮಂಜು ಮೂಲಕ ಆರೋಪಿ ಗಗನ್ ಬಗೆಗಿನ ಮಾಹಿತಿಯನ್ನು ಉದ್ಯಮಿ ಗೋವಿಂದಬಾಬು ಪೂಜಾರಿ ಕಲೆ ಹಾಕಿದ್ದರು.

ಉದ್ಯಮಿಗೆ 5 ಕೋಟಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಆರೋಪಿ ‘ಅಭಿನವ ಹಾಲಶ್ರೀ’ ಯನ್ನು ಸಿಸಿಬಿ ಪೊಲೀಸರು ಬಂಧಿಸಿ ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ಈ ಬೆನ್ನಲ್ಲೇ ಮತ್ತೋರ್ವ ಹಿಂದೂ ಕಾರ್ಯಕರ್ತ’ನಿಗೆ ಸಿಸಿಬಿ ಬುಲಾವ್ ನೀಡಿದೆ. ವಂಚನೆ ಪ್ರಕರಣ ಮತ್ತಷ್ಟು ತಿರುವು ಪಡೆಯುವ ಸಾಧ್ಯತೆಯಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read