alex Certify ಮೃತ ಮೂವರು ಅಭಿಮಾನಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರದ ಚೆಕ್ ತಲುಪಿಸಿದ ನಟ ಯಶ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೃತ ಮೂವರು ಅಭಿಮಾನಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರದ ಚೆಕ್ ತಲುಪಿಸಿದ ನಟ ಯಶ್

ನಟ ಯಶ್ ‘ಬರ್ತ್ ಡೇ’ ಕಟೌಟ್ ಕಟ್ಟುವಾಗ ಮೂವರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಅಭಿಮಾನಿಗಳ ಕುಟುಂಬಕ್ಕೆ ನಟ ಯಶ್ ತಲಾ 5 ಲಕ್ಷ ರೂ. ಪರಿಹಾರದ ಚೆಕ್ ತಲುಪಿಸಿದ್ದಾರೆ.

ನಟ ಯಶ್ ಆಪ್ತರು ಗದಗ ಜಿಲ್ಲೆಯ ಸೊರಣಗಿ ಗ್ರಾಮಕ್ಕೆ ತೆರಳಿ ಪರಿಹಾರದ ಚೆಕ್ ನೀಡಿದ್ದಾರೆ. ಪ್ರತಿ ಕುಟುಂಬಕ್ಕೆ ತಲಾ ಐದು ಲಕ್ಷ ರೂಪಾಯಿ ಚೆಕ್ ನೀಡಲಾಗಿದೆ. ಯಶ್ ಆಪ್ತರು ಚೆಕ್ ನೀಡಲು ಬರುತ್ತಿದ್ದಂತೆ ಮೃತ ಅಭಿಮಾನಿಗಳ ಕುಟುಂಬದವರು ಕಣ್ಣೀರಿಟ್ಟಿದ್ದಾರೆ.

ರಾಕಿಂಗ್ ಸ್ಟಾರ್ ಯಶ್ ಅವರ ಬರ್ತಡೇ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿತ್ತು. ನಂತರ ನಟ ಯಶ್ ಗ್ರಾಮಕ್ಕೆ ಬಂದು ಅಭಿಮಾನಿಗಳ ಕುಟುಂಬದವರಿಗೆ ಸಾಂತ್ವನ ಹೇಳಿದ್ದರು.

ರಾಕಿಂಗ್ ಸ್ಟಾರ್ ಯಶ್ ಅವರ ಬರ್ತಡೇ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಹನುಮಂತ ಹರಿಜನ(21), ಮುರಳಿ ನಡುವಿನಮನೆ(20), ನವೀನ್(19) ಮೃತಪಟ್ಟಿದ್ದರು. ಅವಘಡದಲ್ಲಿ ಮಂಜುನಾಥ, ದೀಪಕ್, ಪ್ರಕಾಶ್ ಗಂಭೀರವಾಗಿ ಗಾಯಗೊಂಡಿದ್ದರು. . ನೀಲಗಿರಿ ತೋಪಿನಲ್ಲಿ ಯಶ್ ಬರ್ತಡೇ ಬ್ಯಾನರ್ ಕಟ್ಟುವಾಗ ದುರಂತ ಸಂಭವಿಸಿದೆ. ಯಶ್ ಅವರ ಅಭಿಮಾನಿಗಳಾಗಿದ್ದ ಯುವಕರು ನೆಚ್ಚಿನ ನಟನ ಹುಟ್ಟುಹಬ್ಬದ ಅಂಗವಾಗಿ ಬೃಹತ್ ಬ್ಯಾನರ್ ಕಟೌಟ್ ಕಟ್ಟಿ ಮೇಲೆತ್ತಿ ನಿಲ್ಲಿಸುವಾಗ ಕರೆಂಟ್ ವೈರ್ ತಗುಲಿ ವಿದ್ಯುತ್ ಪ್ರವಹಿಸಿದ್ದು, ಸ್ಥಳದಲ್ಲೇ ಮೂವರು ಮೃತಪಟ್ಟಿದ್ದರು.

 

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...